ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಕೇಂದ್ರ ಸರ್ಕಾರದ ಬೆಲೆ ಏರಿಕೆ ಹಾಗೂ ರಾಜ್ಯ ಬಿಜೆಪಿಯ ದ್ವಂದ್ವ ನಿಲುವಿನ ವಿರುದ್ಧ ಏ.17 ರಂದು ಪ್ರತಿಭಟನೆ

April 10, 2025
Share on WhatsappShare on FacebookShare on Twitter

ಬೆಂಗಳೂರು: “ಬಿಜೆಪಿಯ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಹಾಗೂ ರಾಜ್ಯ ಬಿಜೆಪಿಯ ದ್ವಂದ್ವ ನಿಲುವಿನ ವಿರುದ್ಧ ಇದೇ ಏ.17 ರಂದು ಜಿಲ್ಲಾ ಕೇಂದ್ರಗಳು ಹಾಗೂ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆ ಹಾಗೂ ರಾಜ್ಯ ಬಿಜೆಪಿಯ ಇಬ್ಬಗೆ ನೀತಿಯ ವಿರುದ್ಧ ಸರಣಿ ವಾಗ್ದಾಳಿ ನಡೆಸಿದರು.
“ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಹೋರಾಟದ ಸ್ವರೂಪವನ್ನು ಶೀಘ್ರ ತಿಳಿಸಲಾಗುತ್ತದೆ. ಅವರ ಜನಾಕ್ರೋಶ ಯಾತ್ರೆಯ ವಿರುದ್ಧ ನಾವು ಏನಾದರೂ ಮಾಡಬೇಕಲ್ಲವೇ?” ಎಂದು ಹೇಳಿದರು.

ಆರ್.ಅಶೋಕ್ ಹಾಗೂ ವಿಜಯೇಂದ್ರ ಅವರಿಗೆ ಕೇವಲ ರಾಜ್ಯ ಸರ್ಕಾರ ಏರಿಸಿದ ಹಾಲಿನ ದರ ಮಾತ್ರ ಕಣ್ಣಿಗೆ ಕಾಣುತ್ತಿದೆಯೇ? ಬಿಜೆಪಿ ರಾಜ್ಯದಲ್ಲಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಮಾಡುತ್ತಿರುವ ಯಾತ್ರೆ” ಕುಹಕವಾಡಿದರು.

ಕೇಂದ್ರ ಬಿಜೆಪಿಯಿಂದ ರಾಜ್ಯ ಬಿಜೆಪಿಗೆ ಗಿಫ್ಟ್
“ಬಿಜೆಪಿಯವರು ಯಾತ್ರೆ ಹೊರಟ ದಿನವೇ ಕೇಂದ್ರ ಸರ್ಕಾರದವರು ಪೆಟ್ರೋಲ್, ಡೀಸೆಲ್ ಗೆ ತಲಾ 2 ರೂಪಾಯಿ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆಯನ್ನು 50 ರೂಪಾಯಿ ಜಾಸ್ತಿ ಮಾಡಿ ಉದ್ಘಾಟನೆ ಮಾಡಿ‌, ಇವರ ಯಾತ್ರೆಗೆ ‘ಗಿಫ್ಟ್’ ಕಳಿಸಿದ್ದಾರೆ. ಇದರ ಬಗ್ಗೆ ಜನಸಾಮಾನ್ಯರು ಮಾಡುತ್ತಿರುವ ಗುಣಗಾನವನ್ನು ಎಲ್ಲರು ಕೇಳಬೇಕು. ಕೇಂದ್ರ ಸರ್ಕಾರದ ವಿರುದ್ಧ ಮಾಡುತ್ತಿರುವ ಜನಾಕ್ರೋಶ ಯಾತ್ರೆ ಎಂದು ಬಿಜೆಪಿಯವರು ಬೋರ್ಡ್ ಹಾಕಿಕೊಳ್ಳಬೇಕು” ಎಂದರು.

“ಬುಧವಾರದಂದು ಕಚ್ಚಾ ತೈಲದ ಬೆಲೆ ಶೇ. 4.23 ರಷ್ಟು ಇಳಿಕೆಯಾಗಿದೆ. ಆದರೂ ಕೇಂದ್ರ ಸರ್ಕಾರ ಬೆಲೆ ಇಳಿಕೆ ಮಾಡಿಲ್ಲ. ಪೆಟ್ರೋಲ್ ನ ಮೂಲ ದರ ಪ್ರತಿ ಲೀಟರ್ ಗೆ 42.60 ಪೈಸೆ ಇದೆ. ದೇಶದಾದ್ಯಂತ ಪ್ರತಿ ಲೀಟರ್ ಪೆಟ್ರೋಲ್ ‌103 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಒಂದು ಲೀಟರ್ ಗೆ ರೂ.60 ರೂಪಾಯಿ ಲಾಭ ಸರ್ಕಾರಕ್ಕೆ ಸಿಗುತ್ತಿದೆ. ಡೀಸಲ್ ಬೆಲೆ ರೂ.91 ರೂಪಾಯಿ ಇದೆ. ರೂ. 43 ಲಾಭ ಮಾಡುತ್ತಿದ್ದಾರೆ. ಶೇಕಡ 60 ರಷ್ಟು ತೆರಿಗೆ ಪೆಟ್ರೋಲ್, ಡೀಸೆಲ್ ಮೇಲೆ ಹಾಕಿದ್ದಾರೆ” ಎಂದರು.

“ನಮ್ಮ ಸರ್ಕಾರ ರೈತರ ಬದುಕನ್ನು ಉಳಿಸಲು ಹಾಲಿನ ದರ ಏರಿಕೆ ಮಾಡಿದ್ದೇವೆ. ಶಾಸಕರಾದ ವಿನಯ್ ಕುಲಕರ್ಣಿ ಅವರು ಪಶುಸಂಗೋಪನೆ ಮಾಡುತ್ತಿದ್ದಾರೆ. ಎಷ್ಟು ಖರ್ಚು ವೆಚ್ಚಗಳು ಹೆಚ್ಚಾಗಿವೆ ಎಂದು ಅವರನ್ನೇ ಕೇಳಬೇಕು. ಬಿಜೆಪಿಯವರು ಜಾನುವಾರುಗಳ ಬೂಸಾ, ಹಿಂಡಿ ಬೆಲೆಯನ್ನು ಏಕೆ ಕಡಿಮೆ ಮಾಡಿಸಲಿಲ್ಲ” ಎಂದರು‌.

“ಹಾಲಿನ ದರ ನಮ್ಮ ರಾಜ್ಯದಲ್ಲಿ ಅತ್ಯಂತ ಕಡಿಮೆಯಿದೆ. ಕರ್ನಾಟಕದಲ್ಲಿ 42 ರೂಪಾಯಿ ಇದ್ದರೆ. ಕೇರಳ 52 ರೂ, ಗುಜರಾತ್ 53 ರೂ, ದೆಹಲಿ 55 ರೂ, ಮಹಾರಾಷ್ಟ್ರ 52 ರೂ, ತೆಲಂಗಾಣ 58 ರೂ, ಅಸ್ಸಾಂ 60 ರೂ, ಹರಿಯಾಣ 56 ರೂ, ರಾಜಸ್ಥಾನ 50 ರೂ, ಮಧ್ಯಪ್ರದೇಶ 52 ರೂ, ಪಂಜಾಬ್ 56 ರೂ, ಉತ್ತರ ಪ್ರದೇಶ 56 ರೂಪಾಯಿ ಬೆಲೆಯಿದೆ” ಎಂದು ವಿವರಿಸಿದರು‌.

“ನೀರಿನ ಬೆಲೆ ಏರಿಕೆಯನ್ನು ಅತ್ಯಂತ ಕಡಿಮೆ ಮಾಡಿದ್ದೇವೆ. ಕಸ ಸಂಗ್ರಹಣೆ ಶುಲ್ಕವನ್ನು ಈ ಹಿಂದಿನ ಬಿಜೆಪಿ ಸರ್ಕಾರ ನಿಗದಿ ಮಾಡಿದ್ದಕ್ಕಿಂತ ಕಡಿಮೆ ನಿಗದಿ ಮಾಡಿ ಬಡವರ ಪರವಾಗಿ ನಾವು ನಿರ್ಧಾರ ತೆಗೆದುಕೊಂಡಿದ್ದೇವೆ. ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದ ಜನರ ಬದುಕು ಹಸನಾಗಲಿ ಎಂದು ಗ್ಯಾರಂಟಿ ಯೋಜನೆ ಮೂಲಕ ರೂ.52 ಸಾವಿರ ಕೋಟಿ ಮೀಸಲಿಟ್ಟಿದ್ದೇವೆ” ಎಂದರು.

“ಯುಪಿಎ ಸರ್ಕಾರದ ಅವಧಿಯಲ್ಲಿ ಚಿನ್ನದ ಬೆಲೆ ರೂ. 28 ಸಾವಿರವಿತ್ತು ಈಗ ರೂ.92 ಸಾವಿರವಿದೆ. 10 ಸಾವಿರವಿದ್ದ ಮೊಬೈಲ್ ದರ 30 ಸಾವಿರಕ್ಕೆ ಏರಿಕೆಯಾಗಿದೆ. ರೂ.13 ಸಾವಿರವಿದ್ದ 32 ಇಂಚಿನ ಟಿವಿ ರೂ.36 ಸಾವಿರವಾಗಿದೆ. 1.5 ಟನ್ ಸಾಮರ್ಥ್ಯದ ಎಸಿ ಬೆಲೆ ರೂ.25 ಸಾವಿರದಿಂದ ರೂ.44 ಸಾವಿರಕ್ಕೆ ಏರಿಕೆಯಾಗಿದೆ. ಫ್ರಿಡ್ಜ್ ಬೆಲೆ ರೂ. 10 ಸಾವಿರದಿಂದ 25 ಸಾವಿರಕ್ಕೆ ಹೆಚ್ಚಾಗಿದೆ. ರೂ.59 ಇದ್ದ ಡಾಲರ್ ಬೆಲೆ ಈಗ ರೂ. 89 ಆಗಿದೆ. ಸಿಮೆಂಟ್ ಬೆಲೆ 268 ಇದ್ದಿದ್ದು ಈಗ ರೂ.410 ಕ್ಕೆ ಹೆಚ್ಚಳಗಿದೆ. ಈ ಬೆಲೆಯನ್ನೆಲ್ಲಾ ಯಾರೂ ನಿಯಂತ್ರಣ ಮಾಡುವವರು” ಎಂದರು.

“ಕಬ್ಬಿಣದ ಬೆಲೆ ರೂ.16 ಸಾವಿರ, ಕಾರಿನ ಬೆಲೆಗಳಲ್ಲಿ ಊಹೆಗೂ ನಿಲುಕದ ಜಿಗತವಾಗಿದೆ. ರೂ. 1.5 ಲಕ್ಷಕ್ಕೆ ಸಿಗುತ್ತಿದ್ದ ಮಿನಿ ಟ್ರಾಕ್ಟರ್ ಬೆಲೆ ರೂ. 5 ಲಕ್ಷಕ್ಕೆ ಏರಿಕೆಯಾಗಿದೆ. ಫಾರ್ಚೂನರ್ ಕಾರಿನ ಬೆಲೆ 25 ಲಕ್ಷದಿಂದ 45 ಲಕ್ಷಕ್ಕೆ ಏರಿಕೆಯಾಗಿದೆ” ಎಂದು ವಿವಿಧ ಅಗತ್ಯ ವಸ್ತುಗಳು ಹಾಗೂ ವಾಹನಗಳ ಬೆಲೆಯ ಪಟ್ಟಿಯನ್ನು ಡಿಸಿಎಂ ಮಾಧ್ಯಮಗಳ ಮುಂದಿಟ್ಟರು.

“ರೂ. 80 ಇದ್ದ ಹೆದ್ದಾರಿ ಟೋಲ್ ಬೆಲೆ 250 ಕ್ಕೂ ಹೆಚ್ಚಾಗಿದೆ. ಇದೆಲ್ಲವು ಅಶೋಕ್ ಅವರಿಗೆ ಕಾಣಿಸುತ್ತಿಲ್ಲವೇ? ಹಾಲಿನ ದರ ಏರಿಕೆ ವಿರೋಧಿಸುವ ನೀವು ರೈತ ವಿರೋಧಿಗಳು. ಬ್ಯಾಂಕ್ ಗಳಲ್ಲಿ ಹಣ ಕಟ್ಟಲು, ಬಿಡಿಸಲು, ಚೆಕ್ ಬುಕ್ ತೆಗೆದುಕೊಳ್ಳಲು ಹೀಗೆ ಎಲ್ಲದಕ್ಕೂ ಶುಲ್ಕ ವಿಧಿಸಿ ಸುಲಿಗೆ ಮಾಡಲಾಗುತ್ತಿದೆ. ಇದು ದೊಡ್ಡ ಹಗರಣವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಇತ್ತೀಚೆಗೆ ಹೇಳುತ್ತಿದ್ದರು” ಎಂದರು.

ಬಿಜೆಪಿಯವರ ಫೋಟೋ ಹಾಕಿಕೊಳ್ಳಲಿ
“ಬಿಜೆಪಿಯವರು ಪ್ರತಿಭಟನಾ ಬ್ಯಾನರ್ ನಲ್ಲಿ ನನ್ನ ಹಾಗೂ ಸಿದ್ದರಾಮಯ್ಯ ಅವರ ಫೋಟೋಗಳನ್ನು ಹಾಕುವ ಬದಲು ಕೇಂದ್ರ ನಾಯಕರ ಫೋಟೋ ಹಾಕಿಕೊಳ್ಳಿ, ನಮ್ಮ ಬೆಲೆ ಏರಿಕೆ ಬದಲು ಬಿಜೆಪಿ ಬೆಲೆ ಏರಿಕೆಯನ್ನು ಪ್ರಶ್ನಿಸಿ. ನಿಮ್ಮ ಆಕ್ರೋಶ ನಿಮ್ಮ ನಾಯಕರ ಮೇಲಿರಲಿ, ಇದರಿಂದ ಜನರಿಗೆ, ಪಕ್ಷಕ್ಕೆ ಸೇರಿದಂತೆ ಎಲ್ಲರಿಗೂ ತೊಂದರೆಯಾಗುತ್ತಿದೆ ಎಂದು ವಿವರಿಸಬೇಕು” ಎಂದು ವ್ಯಂಗ್ಯವಾಡಿದರು.
“ಬಿಜೆಪಿಯವರ ಹೋರಾಟ ಗ್ಯಾರಂಟಿಗಳ ವಿರುದ್ಧ ನಡೆಯುತ್ತಿದೆ. 1 ಕೋಟಿ 22 ಲಕ್ಷ ಮಹಿಳೆಯರು ಗೃಹಲಕ್ಷ್ಮೀ ಲಾಭ ಪಡೆಯುತ್ತಿದ್ದಾರೆ. ತೆಲಂಗಾಣದಲ್ಲಿ ನಮ್ಮ ಪಕ್ಷದ ಸರ್ಕಾರವಿದೆ ಅಲ್ಲಿ 6 ಕೆಜಿ ಅಕ್ಕಿ ಕೊಡುತ್ತಿದ್ದೇವೆ. ನಮ್ಮಲ್ಲಿ 10 ಕೆಜಿ ನೀಡಲಾಗುತ್ತಿದೆ. ನಾವು ಇಷ್ಟರ ಮಟ್ಟಿಗೆ ಗ್ಯಾರಂಟಿಗಳನ್ನು ನೀಡಿ ಯಶಸ್ವಿಯಾಗುತ್ತೇವೆ ಎಂದು ಅವರು ಎಣಿಸಿರಲಿಲ್ಲ ಅದಕ್ಕೆ ಅವರಿಗೆ ಹೊಟ್ಟೆಯುರಿ” ಎಂದರು.

ಬಸವಣ್ಣನವರ ವಚನದ ಮೂಲಕ ತಿರುಗೇಟು ನೀಡಿದ ಡಿಸಿಎಂ
“ಲೋಕದ ಡೊಂಕ ನೀವೇಕೆ ತಿದ್ದುವಿರಿ? ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ; ನಿಮ್ಮ ಮನವ ಸಂತೈಸಿಕೊಳ್ಳಿ ಕೂಡಲಸಂಗಮದೇವ ಎಂದು ವಚನ ಉಲ್ಲೇಖಿಸಿದ ಡಿಸಿಎಂ ಅವರು ಆ ಪಕ್ಷದ ಎಲ್ಲರೂ ವೀರರು ಶೂರರು ಆಗಲು ಹೊರಟಿದ್ದಾರೆ. ಬಿಜೆಪಿಯವರ ಪಾತ್ರೆಗಳೆಲ್ಲ ತೂತಾಗಿ ಸೋರುತ್ತಿದೆ” ಎಂದರು.

“ಕೇಂದ್ರ ಬಿಜೆಪಿ ಸರ್ಕಾರದ ಜನಾಕ್ರೋಶ ಎಂದು ಬಿಹೆಪಿಯವರು ಯಾತ್ರೆ ಮುಂದುವರೆಸಬೇಕು. ಯಾವುದೇ ಕಾರಣಕ್ಕೂ ಇದನ್ನು ನಿಲ್ಲಿಸಬಾರದು. ಅಮೇರಿಕಾದ ಸುಂಕ ನೀತಿಯಿಂದ ದೇಶದ ಜನರಿಗೆ ಆಗಿರುವ ನಷ್ಟದ ಬಗ್ಗೆ ಏಕೆ ಯಾರೂ ಮಾತನಾಡುತ್ತಿಲ್ಲ. ಷೇರು ಪೇಟೆ ಮುಳುಗಿ ಹೋಗಿದೆ ಆದರೂ ಏಕೆ ಮಾತನಾಡುತ್ತಿಲ್ಲ” ಎಂದರು.

ನೀವು ಯಾವ ವಸ್ತುಗಳ ಬೆಲೆ ಕಡಿಮೆ ಮಾಡಲು ಹೋರಾಟ ಮಾಡುತ್ತೀರಿ ಎಂದು ಕೇಳಿದಾಗ, “ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿದ ಕಾರಣಕ್ಕೆ ನಮ್ಮಲ್ಲಿಯೂ ಬೆಲೆ ಏರಿಕೆಯಾಗಿದೆ. ಅವರ ನೀತಿಯ ಕಾರಣಕ್ಕೆ ನಾವು ಬೆಲೆ ಏರಿಕೆ ಮಾಡದೇ ವಿಧಿಯಿಲ್ಲ” ಎಂದು ಹೇಳಿದರು.
ಎರಡೂ ಸರ್ಕಾರಗಳ ನಡುವೆ ನಲುಗುತ್ತಿರುವುದು ಜನ

ಸಾಮಾನ್ಯರು ಎಂದಾಗ, “ಅದಕ್ಕೆ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ 52 ಸಾವಿರ ಕೋಟಿ ನೀಡುತ್ತಿರುವುದು” ಎಂದರು. “ಜಿಎಸ್ ಟಿಯನ್ನು ಈಗಾಗಲೇ ನಮ್ಮ ನಾಯಕರು ಗಬ್ಬರ್ ಸಿಂಗ್ ಟ್ಯಾಕ್ಸ್ ಎಂದು ಹೆಸರಿಟ್ಟಿದ್ದಾರೆ. ಎಲ್ಲಾ ಬೆಲೆ ಏರಿಕೆಗೂ ಜಿಎಸ್ ಟಿಯೇ ಮೂಲ” ಎಂದರು‌. ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ಒನ್ ಎನ್ನುವ ರಾಯರೆಡ್ಡಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅದನ್ನು ಅವರು ಹೇಳಿಲ್ಲ ಎನ್ನುವ ಮರು ಹೇಳಿಕೆ ನೀಡಿದ್ದಾರಲ್ಲ. ಇದರ ಬಗ್ಗೆ ಅವರನ್ನು ಕರೆದು ಮಾತನಾಡುತ್ತೇನೆ. ಅವರ ಬಳಿ ಚರ್ಚೆ ನಡೆಸುತ್ತೇನೆ” ಎಂದು ಹೇಳಿದರು.

ಬಿಲ್ ಪಾವತಿಗೆ ಕೆಲವು ಸಚಿವರು ವಿಳಂಬ ಮಾಡುತ್ತಿದ್ದಾರೆ. ಎನ್ ಓಸಿಗೆ ಕಮಿಷನ್ ಕೇಳುತ್ತಿರುವುದರ ಬಗ್ಗೆ ಗುತ್ತಿಗೆದಾರರ ಸಂಘ ಪತ್ರ ಬರೆದಿರುವ ಬಗ್ಗೆ ಕೇಳಿದಾಗ, “ಇದರ ಬಗ್ಗೆ ಲೋಕಾಯುಕ್ತಕ್ಕೆ ಹಾಗೂ ಸರ್ಕಾರಕ್ಕೆ ದೂರು ನೀಡಲಿ. ನಮ್ಮ ಸರ್ಕಾರ ನ್ಯಾಯಬದ್ಧವಾಗಿ ಆಡಳಿತ ನೀಡುತ್ತೇವೆ. ನಾವು ಯಾವುದೇ ಲಂಚಕ್ಕೆ ಪ್ರೋತ್ಸಾಹ ನೀಡುವವರಲ್ಲ. ನನ್ನ ಇಲಾಖೆಯನ್ನು ಪ್ರಸ್ತಾಪ ಮಾಡಿರಬಹುದು. ಎಲ್ಲಾ ಇಲಾಖೆಗಳ ಬಗ್ಗೆಯೂ ದೂರು ನೀಡಿರಬಹುದು. ಗುತ್ತಿಗೆದಾರರು ದೂರು ನೀಡಲಿ. ನಮಗೆ ಬಿಲ್ ನೀಡಿ ಎಂದು ಕೇಳುತ್ತಾರೆ. ನಾವು ಶೇ. 10-20 ರಷ್ಟು ಬಿಲ್ ಬಿಡುಗಡೆ ಮಾಡಿರುತ್ತೇವೆ” ಎಂದರು.

ಅಹಮದಾಬಾದ್ ಎಐಸಿಸಿ ಅಧಿವೇಶನದ ಬಗ್ಗೆ ಕೇಳಿದಾಗ, “ಬೆಳಗಾವಿಯ ಅಧಿವೇಶನದಲ್ಲಿ ಈ ವರ್ಷವನ್ನು ಸಂಘಟನೆಯ ವರ್ಷ ಎಂದು ಘೋಷಣೆ ಮಾಡಲಾಗಿತ್ತು. ಸ್ಥಳೀಯ ಮಟ್ಟದ ನಾಯಕರಿಗೆ ಹೆಚ್ಚಿನ ಅಧಿಕಾರ ಕೊಡಬೇಕು ಎನ್ನುವ ಚರ್ಚೆ ನಡೆಸಲಾಯಿತು. ಬಡ, ಹಿಂದುಳಿದ ವರ್ಗಗಳ ರಕ್ಷಣೆಗೆ ಹೊಸ ಕಾರ್ಯಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತೀರ್ಮಾನ ಮಾಡಲಾಯಿತು. ಪಕ್ಷಕ್ಕೆ ಹೊಸದಿಕ್ಕು ನೀಡುವುದಕ್ಕೆ ಹೆಚ್ಚಿನ ಒತ್ತು ನೀಡಲಾಯಿತು” ಎಂದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸೇರಿದಂತೆ ಇತರೇ ಚರ್ಚೆಗಳ ಬಗ್ಗೆ ಕೇಳಿದಾಗ, “ಯಾವುದೇ ಬದಲಾವಣೆಯಿಲ್ಲ. ಒಂದಷ್ಟು ಪದಾಧಿಕಾರಿಗಳನ್ನು ನೇಮಕ ಮಾಡುತ್ತಾರೆ. ಒಂದಷ್ಟು ಜಿಲ್ಲಾ ಅಧ್ಯಕ್ಷರನ್ನು ಬದಲಾವಣೆ ಮಾಡುತ್ತಾರೆ. ಇದು ಹೊರತಾಗಿ ಯಾರೂ ಸಹ ಯಾವುದೇ ವಿಷಯವನ್ನು ನನ್ನ ಬಳಿ ಚರ್ಚೆ ಮಾಡಿಲ್ಲ” ಎಂದರು.

ವಿಧಾನಪರಿಷತ್ ಸದಸ್ಯರ ನಾಮನಿರ್ದೇಶನದ ಬಗ್ಗೆ ಕೇಳಿದಾಗ, “ಏ.17 ರಂದು ಪ್ರಧಾನ ಕಾರ್ಯದರ್ಶಿಗಳು ರಾಜ್ಯಕ್ಕೆ ಬರಲಿದ್ದಾರೆ” ಎಂದರು. ಬೆಂಗಳೂರು ಬಿಟ್ಟು ಬೇರೆ ಕಡೆ ಎರಡನೇ ವಿಮಾನ ನಿಲ್ದಾಣವಾಗಲಿ ಎಂದು ಒಂದಷ್ಟು ಶಾಸಕರು ಪತ್ರ ಬರೆದಿರುವ ಬಗ್ಗೆ ಕೇಳಿದಾಗ, “ನನಗೆ ಈ ಬಗ್ಗೆ ತಿಳಿದಿಲ್ಲ. ನನಗೆ ಇಡೀ ಕರ್ನಾಟಕವೇ ಒಂದು. ಚಾಮರಾಜನಗರ, ಬೀದರ್, ಗುಲ್ಬರ್ಗಾ ಎಲ್ಲವೂ ನನಗೆ ಒಂದೇ. ಒಂದಷ್ಟು ಜನ ತಮ್ಮ ಆಸೆ ಹೇಳಿಕೊಂಡಿದ್ದಾರೆ. ಅವರಲ್ಲಿ ಭೂಮಿ ಬೆಲೆ ಕಡಿಮೆಯಿದೆ ಆದ ಕಾರಣಕ್ಕೆ ಹೇಳಿರಬಹುದು. ಇದರ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ಮಾಡುತ್ತದೆ ಹೊ…

Tags: bangaloreBJPKPCCProtest
SendShareTweet
Previous Post

MS Dhoni : ರುತುರಾಜ್​ಗೆ ಗಾಯ; ಎಂಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್‌ಗೆ ನಾಯಕ!

Next Post

ರಾಜ್ಯದ ಜನರಿಗೆ ಮತ್ತೊಂದು ದರ ಏರಿಕೆಯ ಶಾಕ್‌!

Related Posts

ನೆಲಮಂಗಲದಲ್ಲಿ ಭೀಕರ ಅಪಘಾತ.. ಪಿಕ್-ಅಪ್  ಚಾಲಕ ಬದುಕಿದ್ದೇ ಪವಾಡ!
ಬೆಂಗಳೂರು ಗ್ರಾಮಾಂತರ

ನೆಲಮಂಗಲದಲ್ಲಿ ಭೀಕರ ಅಪಘಾತ.. ಪಿಕ್-ಅಪ್ ಚಾಲಕ ಬದುಕಿದ್ದೇ ಪವಾಡ!

ಕೊಡಲಿಯಿಂದ ಕೊಚ್ಚಿ ವೃದ್ಧ ಮಹಿಳೆಯನ್ನು ಕೊಂದ ಆರೋಪಿ ಆತ್ಮಹತ್ಯೆ
ಬೆಂಗಳೂರು ಗ್ರಾಮಾಂತರ

ಕೊಡಲಿಯಿಂದ ಕೊಚ್ಚಿ ವೃದ್ಧ ಮಹಿಳೆಯನ್ನು ಕೊಂದ ಆರೋಪಿ ಆತ್ಮಹತ್ಯೆ

ನೆಲಮಂಗಲದಲ್ಲಿ ಚಿರತೆ ದಾಳಿ ಹೆಚ್ಚಳ | ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬೆಂಗಳೂರು ಗ್ರಾಮಾಂತರ

ನೆಲಮಂಗಲದಲ್ಲಿ ಚಿರತೆ ದಾಳಿ ಹೆಚ್ಚಳ | ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಕ್ಕಳನ್ನ ವಾಕಿಂಗ್ ಕರೆದೊಯ್ಯುವ ಪೋಷಕರೇ ಎಚ್ಚರ | 5 ವರ್ಷದ ಮಗುವಿಗೆ ರಸ್ತೆಯಲ್ಲಿ ಹಾವು ಕಡಿತ
ಬೆಂಗಳೂರು ಗ್ರಾಮಾಂತರ

ಮಕ್ಕಳನ್ನ ವಾಕಿಂಗ್ ಕರೆದೊಯ್ಯುವ ಪೋಷಕರೇ ಎಚ್ಚರ | 5 ವರ್ಷದ ಮಗುವಿಗೆ ರಸ್ತೆಯಲ್ಲಿ ಹಾವು ಕಡಿತ

ನಂಬರ್ ಪ್ಲೇಟ್ ಇಲ್ಲದೇ ವಿಲೀಂಗ್ | ಹೆದ್ದಾರಿಯಲ್ಲಿ ಪುಂಡರ ದಾಂಧಲೆ
ಬೆಂಗಳೂರು ಗ್ರಾಮಾಂತರ

ನಂಬರ್ ಪ್ಲೇಟ್ ಇಲ್ಲದೇ ವಿಲೀಂಗ್ | ಹೆದ್ದಾರಿಯಲ್ಲಿ ಪುಂಡರ ದಾಂಧಲೆ

ಆನೇಕಲ್ | ನಿಧಿಗಾಗಿ ದತ್ತು ಪೋಷಕರಿಂದ ಮಗು ಬಲಿ ಪೂಜೆ
ಬೆಂಗಳೂರು ಗ್ರಾಮಾಂತರ

ಆನೇಕಲ್ | ನಿಧಿಗಾಗಿ ದತ್ತು ಪೋಷಕರಿಂದ ಮಗು ಬಲಿ ಪೂಜೆ

Next Post
ಬಲು ದುಬಾರಿ ದುನಿಯಾ ಇದು!

ರಾಜ್ಯದ ಜನರಿಗೆ ಮತ್ತೊಂದು ದರ ಏರಿಕೆಯ ಶಾಕ್‌!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಭೀಕರ ಅಪಘಾತ | ಕಾಲೇಜು ಬಸ್ ಡಿಕ್ಕಿಯಾಗಿ ತಾಯಿ, ಮಗ ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ | ಕಾಲೇಜು ಬಸ್ ಡಿಕ್ಕಿಯಾಗಿ ತಾಯಿ, ಮಗ ಸಾವು!

BBK-12 ರನ್ನರ್‌ ಅಪ್‌ ರಕ್ಷಿತಾ ಶೆಟ್ಟಿ.. ಕೋಟ್ಯಾಂತರ ಮನಸ್ಸುಗಳನ್ನು ಗೆದ್ದ ಕರಾವಳಿ ಪೋರಿ!

BBK-12 ರನ್ನರ್‌ ಅಪ್‌ ರಕ್ಷಿತಾ ಶೆಟ್ಟಿ.. ಕೋಟ್ಯಾಂತರ ಮನಸ್ಸುಗಳನ್ನು ಗೆದ್ದ ಕರಾವಳಿ ಪೋರಿ!

ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ, ರನ್ನರ್‌ ರಕ್ಷಿತಾ, ಅಶ್ವಿನಿಗೌಡಗೆ ಏನೆಲ್ಲಾ ಬಹಿಮಾನ ಸಿಕ್ಕಿದೆ ಗೊತ್ತಾ!

ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ, ರನ್ನರ್‌ ರಕ್ಷಿತಾ, ಅಶ್ವಿನಿಗೌಡಗೆ ಏನೆಲ್ಲಾ ಬಹಿಮಾನ ಸಿಕ್ಕಿದೆ ಗೊತ್ತಾ!

BBK Season 12 Winner | ಐತಿಹಾಸಿಕ ದಾಖಲೆ ಬರೆದು ಟ್ರೋಫಿಗೆ ಮುತ್ತಿಟ್ಟ ‘ಗಿಲ್ಲಿ ನಟ’

BBK Season 12 Winner | ಐತಿಹಾಸಿಕ ದಾಖಲೆ ಬರೆದು ಟ್ರೋಫಿಗೆ ಮುತ್ತಿಟ್ಟ ‘ಗಿಲ್ಲಿ ನಟ’

Recent News

ಬೆಂಗಳೂರಲ್ಲಿ ಭೀಕರ ಅಪಘಾತ | ಕಾಲೇಜು ಬಸ್ ಡಿಕ್ಕಿಯಾಗಿ ತಾಯಿ, ಮಗ ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ | ಕಾಲೇಜು ಬಸ್ ಡಿಕ್ಕಿಯಾಗಿ ತಾಯಿ, ಮಗ ಸಾವು!

BBK-12 ರನ್ನರ್‌ ಅಪ್‌ ರಕ್ಷಿತಾ ಶೆಟ್ಟಿ.. ಕೋಟ್ಯಾಂತರ ಮನಸ್ಸುಗಳನ್ನು ಗೆದ್ದ ಕರಾವಳಿ ಪೋರಿ!

BBK-12 ರನ್ನರ್‌ ಅಪ್‌ ರಕ್ಷಿತಾ ಶೆಟ್ಟಿ.. ಕೋಟ್ಯಾಂತರ ಮನಸ್ಸುಗಳನ್ನು ಗೆದ್ದ ಕರಾವಳಿ ಪೋರಿ!

ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ, ರನ್ನರ್‌ ರಕ್ಷಿತಾ, ಅಶ್ವಿನಿಗೌಡಗೆ ಏನೆಲ್ಲಾ ಬಹಿಮಾನ ಸಿಕ್ಕಿದೆ ಗೊತ್ತಾ!

ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ, ರನ್ನರ್‌ ರಕ್ಷಿತಾ, ಅಶ್ವಿನಿಗೌಡಗೆ ಏನೆಲ್ಲಾ ಬಹಿಮಾನ ಸಿಕ್ಕಿದೆ ಗೊತ್ತಾ!

BBK Season 12 Winner | ಐತಿಹಾಸಿಕ ದಾಖಲೆ ಬರೆದು ಟ್ರೋಫಿಗೆ ಮುತ್ತಿಟ್ಟ ‘ಗಿಲ್ಲಿ ನಟ’

BBK Season 12 Winner | ಐತಿಹಾಸಿಕ ದಾಖಲೆ ಬರೆದು ಟ್ರೋಫಿಗೆ ಮುತ್ತಿಟ್ಟ ‘ಗಿಲ್ಲಿ ನಟ’

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಭೀಕರ ಅಪಘಾತ | ಕಾಲೇಜು ಬಸ್ ಡಿಕ್ಕಿಯಾಗಿ ತಾಯಿ, ಮಗ ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ | ಕಾಲೇಜು ಬಸ್ ಡಿಕ್ಕಿಯಾಗಿ ತಾಯಿ, ಮಗ ಸಾವು!

BBK-12 ರನ್ನರ್‌ ಅಪ್‌ ರಕ್ಷಿತಾ ಶೆಟ್ಟಿ.. ಕೋಟ್ಯಾಂತರ ಮನಸ್ಸುಗಳನ್ನು ಗೆದ್ದ ಕರಾವಳಿ ಪೋರಿ!

BBK-12 ರನ್ನರ್‌ ಅಪ್‌ ರಕ್ಷಿತಾ ಶೆಟ್ಟಿ.. ಕೋಟ್ಯಾಂತರ ಮನಸ್ಸುಗಳನ್ನು ಗೆದ್ದ ಕರಾವಳಿ ಪೋರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat