ಮಂಡ್ಯ: ಪಿಯುಸಿ ಪರೀಕ್ಷೆ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪರೀಕ್ಷೆ ಮುಂದೂಡಲಾಗಿದೆ.
ಇಂದು ಪ್ರಥಮ ಮತ್ತು ದ್ವಿತೀಯ ಪಿಯುಸಿಯ ಮಧ್ಯವಾರ್ಷಿಕ ಪರೀಕ್ಷೆಗಳ ನಡೆಯುತ್ತಿವೆ. ಇಂದು ನಡೆಯಬೇಕಿದ್ದ ಜೀವಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಸೋರಿಕೆಯಾಗಿರುವ ಮಂಡ್ಯದ ಕಾರ್ಮೆಲ್ ಶಿಕ್ಷಣ ಸಂಸ್ಥೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನೋಟಿಸ್ ಜಾರಿ ಮಾಡಿದೆ.
ಮಂಡ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಭಾರ ಉಪನಿರ್ದೇಶಕ ಜಯಶಂಕರಪ್ಪ ಪ್ರತಿಕ್ರಿಯಿಸಿದ್ದು, ಪ್ರಶ್ನೆ ಪತ್ರಿಕೆ ಲೀಕ್ ಆಗಿರುವುದು ತನಿಖೆಯಿಂದ ಬಹಿರಂಗವಾಗಿದೆ. ಹೀಗಾಗಿ ಕಾರ್ಮೆಲ್ ಕಾಲೇಜು ಸಂಸ್ಥೆ ವಿರುದ್ದ ಶಿಸ್ತು ಕ್ರಮಕ್ಕೆ ನೋಟೀಸ್ ಜಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ.
ನ. 6 ರಿಂದ ನ.16ರ ವರೆಗೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಇತ್ತು. ಪ್ರಶ್ನೆ ಪತ್ರಿಕೆಯನ್ನು ನೋಡಲ್ ಅಧಿಕಾರಿ ಮೂಲಕ ಹಂಚಿಕೆ ಮಾಡಲಾಗಿದೆ. ಜೀವಶಾಸ್ತ್ರ ಪರೀಕ್ಷಾ ದಿನಕ್ಕೂ ಮುನ್ನವೇ ಪ್ರಶ್ನೆ ಪತ್ರಿಕೆ ಬಹಿರಂಗವಾಗಿದೆ ಎಂದು ಹೇಳಿದ್ದಾರೆ.