ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸುತ್ತಿದ್ದು, ಈಗ ನಟಿ ರಾಧಿಕಾ ಪಂಡಿತ್ (Radhika Pandit) ಸಂತಾಪ ಸೂಚಿಸಿದ್ದಾರೆ.
ಪೋಸ್ಟ್ ಹಂಚಿಕೊಂಡಿರುವ ನಟಿ, ಬೆಂಗಳೂರಿಗೆ ವಿಶ್ವ ಮಾನ್ಯತೆ ದೊರಕಿಸಿದ ಶಿಸ್ತುಬದ್ಧ ರಾಜಕಾರಣಿ ಎಸ್.ಎಂ ಕೃಷ್ಣ ಎಂದು ಬರೆದುಕೊಂಡಿದ್ದಾರೆ.
ಬೆಂಗಳೂರಿಗೆ ವಿಶ್ವ ಮಾನ್ಯತೆ ದೊರಕಿಸಿದ ಶಿಸ್ತುಬದ್ಧ ರಾಜಕಾರಣಿ, ಹಸನ್ಮುಖಿ, ಕಲಾಪ್ರೇಮಿಯಾಗಿ ಸದಾ ಕಾಲ ನಮ್ಮ ಕುಟುಂಬವನ್ನು ಪ್ರೋತ್ಸಾಹಿಸಿದ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ ಕೃಷ್ಣರವರ ಆತ್ಮಕ್ಕೆ ಶಾಂತಿ ಕೋರುತ್ತೇವೆ. ಓಂ ಶಾಂತಿ ಎಂದು ರಾಧಿಕಾ ಪಂಡಿತ್ ಸಂತಾಪ ಸೂಚಿಸಿದ್ದಾರೆ.
2016ರಲ್ಲಿ ಯಶ್ ಮತ್ತು ರಾಧಿಕಾ ಮದುವೆಗೆ ಎಸ್.ಎಂ ಕೃಷ್ಣ ಬಂದು ಹಾರೈಸಿದ ಫೋಟೋ ಕೂಡ ನಟಿ ಶೇರ್ ಮಾಡಿಕೊಂಡಿದ್ದಾರೆ.