ರಾಹುಲ್ ಗಾಂಧಿಯನ್ನು ನನ್ನ ನಾಯಕನೆಂದು ಹೇಳಿಕೊಳ್ಳಲು ಹೆಮ್ಮೆ ಪಡುತ್ತೇನೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಹುಲ್ ಗಾಂಧಿ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ.
ಸೈದ್ದಾಂತಿಕ ಬದ್ಧತೆ, ಜನಪರ ಕಾಳಜಿ, ಸತ್ಯನಿಷ್ಠುರತೆ, ದೇಶದ ಭವಿಷ್ಯದ ಬಗೆಗಿನ ಸ್ಪಷ್ಟ ಮುನ್ನೋಟ, ಅಪಾರ ಧೈರ್ಯ ಮತ್ತು ಪ್ರೀತಿಯನ್ನು ತುಂಬಿಕೊಂಡ ರಾಹುಲ್ ಗಾಂಧಿ, ಅವರನ್ನು ನನ್ನ ನಾಯಕನೆಂದು ಹೇಳಿಕೊಳ್ಳಲು ಹೆಮ್ಮೆ ಪಡುತ್ತೇನೆ. ಭಾರತದ ಭವಿಷ್ಯದ ಬೆಳಕು ರಾಹುಲ್ ಗಾಂಧಿಯವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಶುಭ ಕೋರಿದ್ದಾರೆ.