ಬೆಂಗಳೂರು: ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ ಎಂದು ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ತಮ್ಮ ಅಧಿಕೃತ ʼಎಕ್ಸ್ʼ ಖಾತೆಯ ಮೂಲಕ ರಾಹುಲ್ ನೇತೃತ್ವದ ಪ್ರತಿಭಟನೆಯನ್ನು ಟೀಕಿಸಿದ ಹೆಚ್.ಡಿ.ಕೆ, ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಸುರಿಸಿ, ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರವಾಗಿದೆ. ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಪ್ರಯೋಜನ ಪಡೆಯುವ ಕಿಡಿಗೇಡಿ ಪಿತೂರಿ ಇದಾಗಿದ್ದು, ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೂಬೆಲ್ ರಾಜಕಾರಣಕ್ಕೆ ಮತಗಳ್ಳತನ ಒಂದೇ ಮದ್ದಾಗಿದೆ ಎಂದಿದ್ದಾರೆ.
ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ. ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದು ಕೇಂದ್ರೀಯ ಚುನಾವಣಾ ಆಯೋಗಕ್ಕೆ ಹೆಚ್.ಡಿ.ಕೆ ಮನವಿ ಮಾಡಿದ್ದಾರೆ.


















