ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಇಸ್ಪೀಟ್ ಜೂಜಾಟದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ಧಾರೆ.
ಈ ಸಂದರ್ಭದಲ್ಲಿ ಅಕ್ರಮವಾಗಿ ಇಸ್ಪೀಟ್ ಆಡುತಿದ್ದ 19 ಮಂದಿ ವಶಕ್ಕೆ ಪಡೆದು 49,50,436 ಲಕ್ಷ ನಗದು, ನಾಲ್ಕು ಕಾರುಗಳು, 15 ಮೊಬೈಲ್, ಇಸ್ಪೀಟ್ ಕಾರ್ಡ್ಗಳನ್ನು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಎಸ್ಪಿ ದೀಪನ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗೀತಾ ಪಾಟೀಲ್ ನೇತ್ರತ್ವದ ತಂಡ ಯಲ್ಲಾಪುರ ಹೆದ್ದಾರಿಯ ಬೈರುಂಬೆಯ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಅಗಸಾಲ ಗ್ರಾಮದ ಹಾವೇರಿ ಮೂಲದ ವೈದ್ಯರೋರ್ವರ ಮಾಲೀಕತ್ವದಲ್ಲಿ ಇರುವ ವಿಆರ್ಆರ್ ಹೋಮ್ ಸ್ಟೇ ಮೇಲೆ ದಾಳಿ ನಡೆಸಲಾಗಿತ್ತು.
ಬಂಧಿತರು ಹಾವೇರಿ, ದಾವಣಗೆರೆ ಮೂಲದವರಾಗಿದ್ದು ಘಟನೆ ಸಂಬಂಧ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



















