ಬೆಂಗಳೂರು: ರೈಲ್ವೇ ನೇಮಕಾತಿ ಪರೀಕ್ಷೆ ಸಂದರ್ಭದಲ್ಲಿ ಮಂಗಳಸೂತ್ರ ಕೂಡ ಧರಿಸುವಂತಿಲ್ಲ ಎಂಬ ನಿಯಮವನ್ನು ಸೂಚಿಸಲಾಗಿತ್ತು. ಆದರೆ, ಈಗ ತೀವ್ರ ಆಕ್ರೋಶದ ಬೆನ್ನಲ್ಲೇ ರೈಲ್ವೆ ಸಚಿವಾಲಯ ನಿಯಮಗಳಲ್ಲಿ ಬದಲಾವಣೆ ಮಾಡಿದೆ.
ಮಂಗಳಸೂತ್ರ ಧರಿಸಿದರೆ ಪರೀಕ್ಷೆಗೆ ಅವಕಾಶವಿಲ್ಲ ಎಂಬ ನಿರ್ಬಂಧವನ್ನು ರೈಲ್ವೆ ಸಚಿವಾಲಯ ಮರಳಿ ಹಿಂಪಡೆದಿದೆ. ರೈಲ್ವೇ ಇಲಾಖೆ ಪ್ರಕಟಿಸಿದ ಮಾರ್ಗಸೂಚಿಯಲ್ಲಿ ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂದು ಉಲ್ಲೇಖಿಸಲಾಗಿತ್ತು.
ಈಗ ಈ ಗೊಂದಲಕ್ಕೆ ಕೇಂದ್ರ ಸಚಿವ ಸೋಮಣ್ಣ ತೆರೆ ಎಳೆದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಜನಿವಾರ, ಮಾಂಗಲ್ಯ, ಸಂಸ್ಕೃತಿ ಬಿಂಬಿಸುವ ಯಾವುದೇ ವಸ್ತು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದೆಂದು ಖಡಕ್ ಆಗಿ ಸೂಚಿಸಿದ್ದಾರೆ.