ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಇಂದು ರಾಜ್ಯದಲ್ಲಿ ಮಳೆ(Rain)ಯಾಗುವ ಸಾಧ್ಯತೆ ಹೆಚ್ಚಿದೆ. ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಹಲವೆಡೆ ಜನ- ಜೀವನ ಅಸ್ತವ್ಯಸ್ಥಗೊಂಡಿದೆ. ಹಲವೆಡೆ ಧರೆ ತಂಪಾಗಿದೆ. ಬುಧವಾರ ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.


















