ಬೆಂಗಳೂರು: ಭಾನುವಾರ ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿ ಮಂದಿಗೆ ಮಳೆರಾಯ ಶಾಕ್ ನೀಡಿದ್ದಾನೆ.
ಬೆಂಗಳೂರಿನ (Bengaluru Rain) ಹಲವೆಡೆ ಭಾನುವಾರ ತುಂತುರು ಮಳೆಯಾಗಿದೆ. ಬೆಳಗ್ಗೆ 6 ಗಂಟೆಯಿಂದ ಯಶವಂತಪುರ, ವಿಜಯನಗರ, ಹೆಬ್ಬಾಳ ಸುತ್ತಮುತ್ತ ಪ್ರದೇಶಗಳಲ್ಲಿ ತುಂತುರು ಮಳೆಯಾಗಿದೆ.
ತಮಿಳುನಾಡಿನ ಬಂಗಾಳಕೊಲ್ಲಿಯಲ್ಲಿ (Bay of Bengal) ವಾಯುಬಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಹಲವಡೆ ಮಳೆಯಾಗಲಿದೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ (IMD) ನೀಡಿದೆ. ಪರಿಣಾಮ ಸಿಲಿಕಾನ್ ಸಿಟಿಯ ಹಲವೆಡೆ ಮಳೆಯಾಗಿದೆ.
ಅಲ್ಲದೇ, ಕರಾವಳಿಯ ಜಿಲ್ಲೆ ದಕ್ಷಿಣ ಕನ್ನಡ, ಮಲೆನಾಡಿನ ಕೊಡಗು, ದಕ್ಷಿಣ ಕರಾವಳಿಯ ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಕೋಲಾರ ಮತ್ತು ಹಾಸನ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.