ಚಿತ್ರದುರ್ಗ: ಜಿಲ್ಲೆಯ ಹಲವೆಡೆ ಗುಡುಗು, ಗಾಳಿ ಸಹಿತ ಆಲಿಕಲ್ಲು ಮಳೆಯಾಗಿದ್ದು. ಅಲ್ಲಿನ ಜನತೆ ಆಲಿಕಲ್ಲುಗಳನ್ನು ಪಾತ್ರೆಗಳಲ್ಲಿ ತುಂಬಿಸಿಕೊಂಡಿದ್ದಾರೆ.
ಕೆಲವು ಕಡೆ ಮಳೆ ಗಾಳಿಗೆ ಮರದ ರೆಂಬೆಗಳು ಬಿದ್ದು ಸುಮಾರು 20ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. ಸದ್ಯ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ. ಇನ್ನು ಗ್ರಾಮದ ರಸ್ತೆಗಳ ತುಂಬಾ ಆಲಿಕಲ್ಲು ಬಿದ್ದ ದೃಶ್ಯ ಮೊಬೈಲ್ ಕ್ಯಾಮಾರದಲ್ಲಿ ಸೆರೆಯಾಗಿದೆ.