ಕಾಂತಾರ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಭಾರೀ ಸದ್ದು ಮಾಡಿ ಜನ ಮನ ಗೆದ್ದಿತ್ತು. ಈ ಚಿತ್ರದ ನಂತರ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಕಾಂತಾರ ಚಾಪ್ಟರ್-1 (Kantara Chapter 1)ಗೆ ಕೈ ಹಾಕಿದ್ದರು. ಆದರೆ, ಚಿತ್ರದ ಶೂಟಿಂಗ್ ಆರಂಭವಾಗಿದ್ದೇ ಆಗಿದ್ದು, ತಂಡಕ್ಕೆ ಶಾಕ್ ಮೇಲೆ ಶಾಕ್ ಎದುರಾಗುತ್ತಿವೆ. ಈಗಾಗಲೇ ಚಿತ್ರದಲ್ಲಿ ನಟಿಸಿದ್ದ ಮೂವರು ಸಹ ಕಲಾವಿದರು ಈಗಾಗಲೇ ದುರ್ಮರಣಕ್ಕೀಡಾಗಿದ್ದಾರೆ. ಹಲವಾರು ದುರಂತಗಳು ಸಂಭವಿಸಿವೆ. ಈಗ ತಂಡಕ್ಕೆ ಮತ್ತೊಂದು ಶಾಕ್ ಎದುರಾಗಿದೆ.
ಸಮಸ್ಯೆಗಳ ಮಧ್ಯೆಯೂ ಕಾಂತಾರ ಚಾಪ್ಟರ್-1 ಸಿನಿಮಾ ತಂಡ ಕೊನೆ ಹಂತದ ಚಿತ್ರೀಕರಣ (Shooting) ನಡೆಸುತ್ತಿದೆ. ಭಾರೀ ಅನಾಹುತವೊಂದು ತಪ್ಪಿದ್ದು, ಮೂವತ್ತು ಜನರು ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ. ಜೂನ್ 14 ರಂದು ತೀರ್ಥಹಳ್ಳಿಯ ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ದೋಣಿ ಮಗುಚಿದ ಘಟನೆ ಸಂಭವಿಸಿದೆ ಎನ್ನಲಾಗಿತ್ತು.
ಮಾಣಿ ಜಲಾಶಯದಲ್ಲಿ (Mani Dam) ಶೂಟಿಂಗ್ ಮಾಡಲು ವಿವಿಧ ಇಲಾಖೆಗಳಿಂದ ಅನುಮತಿ ಪಡೆದಿರುವ ಬಗ್ಗೆ ತಾಲೂಕು ಆಡಳಿತಕ್ಕಾಗಲಿ, ಜಿಲ್ಲಾ ಆಡಳಿತಕ್ಕಾಗಲಿ ಯಾವುದೇ ಮಾಹಿತಿಯನ್ನ ಚಿತ್ರತಂಡ ನೀಡಿರುವುದಿಲ್ಲ. ಶೂಟಿಂಗ್ ವೇಳೆ ಮಾಣಿ ಜಲಾಶಯದಲ್ಲಿ ದೋಣಿ ಮಗುಚಿ 30 ಜನ ಈಜಿ ದಡ ಸೇರಿರುವ ಬಗ್ಗೆ ಸ್ಪಷ್ಟನೆ ಮಾತ್ರ ನೀಡಿದ್ದೀರಿ.
ಗೂದೀದು ಜಿಲ್ಲಾ ಅಧಿಕಾರಿ ಈ ಬಗ್ಗೆ ವರದಿ ಕೇಳಿದ್ದು, ರಾಜಸ್ವ ನಿರೀಕ್ಷಕರು, ನಗರ ಹೋಬಳಿರವರು ನಿಮ್ಮ ಸಂಸ್ಥೆಯ ಮ್ಯಾನೇಜರ್ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಅನುಮತಿ ಪತ್ರಗಳನ್ನ ಹಾಜರುಪಡಿಸುವಂತೆ ಹೇಳಿದ್ದರೂ ಯಾವುದೇ ಸ್ಪಂದನೆ ಸಿಕ್ಕಿರುವುದಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿ ನೋಟಿಸ್ ನೀಡಲಾಗಿದೆ. ಈ ಕುರಿತು ತಹಸೀಲ್ದಾರ್ ಪತ್ರ ಬರೆದಿದ್ದು, ಉತ್ತರ ನೀಡುವಂತೆ ಸೂಚಿಸಿದ್ದಾರೆ.