ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಮತ್ತೆ ರಾಜ್ಯ ಪ್ರವಾಸ ಮಾಡುತ್ತೇನೆಂದು ಘೋಷಿಸಿದ್ದಾರೆ. ಇನ್ನು ಮುಂದೆ ವಾರಕ್ಕೊಂದು ಜಿಲ್ಲೆಗೆ ಪ್ರವಾಸ ಮಾಡುತ್ತೇನೆಂದು ಘೋಷಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಮುಂದೆ ವಾರಕ್ಕೊಂದು ದಿನ ಜಿಲ್ಲೆಯೊಂದಕ್ಕೆ ಭೇಟಿ ನೀಡುತ್ತೇನೆ. ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜನರಿಗೆ ಮಾಹಿತಿ ನೀಡುತ್ತೇನೆ. ಈಗಾಗಲೇ ನಾನು ವಾರಕ್ಕೊಂದು ದಿನ ಬಿಜೆಪಿ ಕಚೇರಿಗೆ ಬರುತ್ತೇನೆ ಎಂದು ಹೇಳಿದ್ದೆ. ಅದೇ ರೀತಿಯಲ್ಲಿ ಇಂದು ಬಿಜೆಪಿ ಪ್ರದಾನ ಕಚೇರಿಗೆ ಬಂದಿದ್ದೇನೆ ಎಂದಿದ್ದಾರೆ.
ಅಭಿವೃದ್ಧಿ ಮಾಡಲು ಸರ್ಕಾರದ ಬಳಿ ಹಣವಿಲ್ಲ. ಈಗಾಗಲೇ ಶಾಸಕ ಬಿ.ಆರ್. ಪಾಟೀಲ್ ಹೇಳಿದ್ದಾರೆ. ಅವರ ಮಾತು ಅಕ್ಷರಶಃ ಸತ್ಯ. ಈಗ ಮುಖ್ಯಮಂತ್ರಿಗಳೇ ಶಾಸಕ ಬಿ.ಆರ್.ಪಾಟೀಲ್ ರನ್ನು ಕರೆದು ಬಾಯಿ ಮುಚ್ಚಿಸುವ ಕೆಲಸ ಮಾಡಬಹುದು. ಅದಕ್ಕೆ ಮುಖ್ಯಮಂತ್ರಿಗಳು ಕರೆ ಮಾಡಿರಬಹುದು ಎಂದು ಆರೋಪಿಸಿದ್ದಾರೆ.
ಮೋಹನ್ದಾಸ್ ಪೈ ಅಂತಾ ಹಿರಿಯರ ಮೇಲೆ ಎಫ್ಐಆರ್ ದಾಖಲಿಸಲು ಮುಂದಾಗುತ್ತಾರೆ ಅಂದರೆ, ಯಾರೂ ಕೂಡ ಸರ್ಕಾರದ ವಿರುದ್ಧ ಮಾತನ್ನಾಡಬಾರದು ಎಂಬ ವಾತಾವರಣ ಸೃಷ್ಠಿಸುತ್ತಿದ್ದಾರೆ ಎಂದು ಗುಡುಗಿದ್ದಾರೆ.