ಬೆಂಗಳೂರು: ನಟಿ ರಕ್ಷಿತಾ ಹಾಗೂ ನಿರ್ದೇಶಕ ಪ್ರೇಮ ಅವರು ಪರಪ್ಪನ ಅಗ್ರಹಾರಕ್ಕೆ ತೆರಳಿ ದರ್ಶನ್ ರನ್ನು ಮಾತನಾಡಿಸಿದ್ದಾರೆ.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿಗಿಂತ ದೊಡ್ಡವರು ಯಾರು ಇಲ್ಲ. ಪ್ರಕರಣ ನ್ಯಾಯಾಲಯದಲ್ಲಿದ್ದು, ಇದರ ಬಗ್ಗೆ ಏನು ಮಾತಾನಾಡುವುದಿಲ್ಲ. ರೇಣುಕ ಸ್ವಾಮಿ ಆತ್ಮಕ್ಕೆ ಶಾಂತಿಸಿಗಲಿ ಎಂದು ಅವರು ಹೇಳಿದರು.

ಅಲ್ಲದೇ, ಯಾರಾದರೂ ಇಂತಹ ಪರಿಸ್ಥಿತಿಯಲ್ಲಿ ಅರಾಮಾಗಿ ಇರುತ್ತಾರಾ ಎಂದು ದರ್ಶನ್ ವಿಷಯವಾಗಿ ಹೇಳಿದರು. ಪರಪ್ಪನ ಅಗ್ರಹಾರಕ್ಕೆ (Parappana Agrahara) ಕಾರಿನಲ್ಲಿ ರಕ್ಷಿತಾ, ಪ್ರೇಮ್ ದಂಪತಿ ಆಗಮಿಸಿ ಭೇಟಿ ಮಾಡಿದರು. ಜೈಲು ನಿಯಮಗಳ ಪ್ರಕಾರ ಒಂದು ವಾರದಲ್ಲಿ ಮೂವರಿಗೆ ಮಾತ್ರ ಬೇಟಿ ಮಾಡಲು ಅವಕಾಶ ಇರುತ್ತದೆ. ಈ ಮೊದಲು ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ಭೇಟಿ ಮಾಡಿದ್ದರು. ನಂತರ ನಟ ವಿನೋದ್ ಪ್ರಭಾಕರ್ ಭೇಟಿಯಾಗಿದ್ದರು.
