ವಿಜಯಪುರ : ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ಡೀಸೆಲ್ಗಾಗಿ ರೈತರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ತಾಳಿಕೋಟೆಯ ಎಚ್ಪಿ ಪೆಟ್ರೋಲ್ ಬಂಕ್ನಲ್ಲಿ ಟ್ರ್ಯಾಕ್ಟರ್ಗಳು ಹಾಗೂ ದೊಡ್ಡ ಪ್ಲಾಸ್ಟಿಕ್ ಕ್ಯಾನ್ಗಳನ್ನು ಹಿಡಿದು ರೈತರು ಭಾರೀ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡುಬಂದಿದೆ.
ಮುಂಗಾರು ಹಂಗಾಮು ಆರಂಭವಾಗಿದ್ದು, ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳು ವೇಗ ಪಡೆದಿವೆ. ಉಳುಮೆ ಕಾರ್ಯಗಳಿಗೆ ಡೀಸೆಲ್ಗೆ ಭಾರೀ ಬೇಡಿಕೆ ಉಂಟಾಗಿದೆ. ಆದರೆ ತಾಳಿಕೋಟೆ ಭಾಗದಲ್ಲಿ ಡೀಸೆಲ್ ಅಭಾವ ಉಂಟಾಗಿರುವುದರಿಂದ ರೈತರು ಗಂಟೆಗಟ್ಟಲೆ ಸಾಲಿನಲ್ಲಿ ನಿಲ್ಲುವಂತಾಗಿದೆ.
ಸ್ಥಳದಲ್ಲಿ ಗಲಾಟೆ ಆಗದಂತೆ ಪೊಲೀಸರು ಬಂದೋಬಸ್ತ್ ಮಾಡಿದ್ದು, ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಟ್ಟಿದ್ದಾರೆ ಎಂದು ತಿಳಿದುಬಂದಿದೆ.


















