ಬೆಂಗಳೂರು: ಕೊನೆಗೂ 18 ವರ್ಷಗಳ ಸತತ ಕಾಯುವಿಕೆಯ ನಂತರ ಬೆಂಗಳೂರು ತಂಡ ಕಪ್ ಗೆ ಮುತ್ತಿಕ್ಕಿದೆ. ಇಡೀ ರಾತ್ರಿ ಆರ್ ಸಿಬಿ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ಮಿಂದಿದ್ದಾರೆ. ಇಂದು ಅಭಿಮಾನಿಗಳೊಂದಿಗೆ ಸಂಭ್ರಮಿಸಲು, ವಿಜಯೋತ್ಸವ ಆಚರಿಸಲು ತಂಡ ಬರಲಿದೆ.
ಅಹಮದಾಬಾದ್ನಿಂದ ವಿಶೇಷ ವಿಮಾನದಲ್ಲಿ ಆರ್ಸಿಬಿ ಆಟಗಾರರು ಹೊರಟು ಮಧ್ಯಾಹ್ನ 1:30ರ ವೇಳೆಗೆ ಬೆಂಗಳೂರು ಹೆಚ್ಎಎಲ್ ವಿಮಾನಕ್ಕೆ ಬಂದಿಳಿಯಲಿದ್ದಾರೆ. ನಂತರ ತಂಡವು ತಾಜ್ ವೆಸ್ಟೆಂಡ್ ಹೋಟೆಲ್ಗೆ ತೆರಳಲಿದೆ. ಸಂಜೆ 4ಕ್ಕೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಟ್ರೋಫಿ ನೀಡಲಿದೆ.
ಸಿಎಂ ಭೇಟಿ ಬಳಿಕ 5 ಗಂಟೆಗೆ ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ (Chinnaswamy Stadium) ಓಪನ್-ಟಾಪ್ ಬಸ್ ಮೂಲಕ ಆರ್ಸಿಬಿ ತಂಡದ ಪರೇಡ್ ನಡೆಸಲಿದೆ. ಸುಮಾರು 1 ಕಿ.ಮೀ ವಿಜಯಯಾತ್ರೆ ಕೈಗೊಳ್ಳಲು ತಂಡದಿಂದ ಸಿದ್ಧತೆ ನಡೆದಿದೆ ಎನ್ನಲಾಗಿದೆ. ಆನಂತರ 6ಕ್ಕೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ ನಡೆಯಲಿದೆ.