ಬೆಂಗಳೂರು: ಐಪಿಎಲ್ ಫೈನಲ್ ನಲ್ಲಿ ಆರ್ ಸಿಬಿ ತಂಡವು ಪಂಜಾಬ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದು, ಎಲ್ಲೆಡೆ ಅಭಿಮಾನಿಗಳು ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ಇನ್ನೊಂದೆಡೆ ಬೆಂಗಳೂರಿನಲ್ಲಿ ವಿಕ್ಟರಿ ಪರೆಡ್ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಈಗ ಪೊಲೀಸ್ ಇಲಾಖೆ ಪರೆಡ್ ಗೆ ಅನುಮತಿ ಇಲ್ಲ ಎಂದು ಹೇಳಿದೆ.
ಈ ಕುರಿತು ಅಧಿಕೃತವಾಗಿ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ. ಆರ್ ಸಿಬಿ ತಂಡದಿಂದ ಚಿನ್ನಸ್ವಾಮಿಯಲ್ಲಿ ಕಾರ್ಯಕ್ರಮ ಮಾತ್ರ ನಡೆಯಲಿದೆ. 5 ರಿಂದ 6ಗಂಟೆ ವರೆಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲಿದೆ. ಪಾಸ್ ಅಥವಾ ಟಿಕೆಟ್ ಇದ್ದವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ಪಾರ್ಕಿಂಗ್ ಸಮಸ್ಯೆ ಹಾಗೂ ಟ್ರಾಫಿಕ್ ಸಮಸ್ಯೆಯಿಂದಾಗಿ ಜನರು ಆದಷ್ಟೂ ಮೆಟ್ರೋ ಬಳಸುವಂತೆ ಪೊಲೀಸ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಮಧ್ಯಾಹ್ನ 3 ಗಂಟೆಯಿಂದ ರಾತ್ರಿ ಎಂಟು ಗಂಟೆವರೆಗೆ ಕಬ್ಬನ್ ಪಾರ್ಕ್, ವಿಧಾನಸೌದ ಸುತ್ತಮುತ್ತಲಿನ ರಸ್ತೆ ಬಳಸದಂತೆ ಸೂಚನೆ ನೀಡಲಾಗಿದೆ. ಸಂಚಾರ ದಟ್ಟಣೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಕುರಿತು ಸೂಚನೆ ನೀಡಲಾಗಿದೆ.