ಉಡುಪಿ: ಈಗಾಗಲೇ ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಉಡುಪಿಯಲ್ಲಿ ನೆನ್ನೆ ರಾತ್ರಿಯಿಂದಲೂ ಸುರಿಯುತ್ತಿರುವ ಗಾಳಿ ಸಹಿತ ಮಳೆಗೆ ನದಿ ಪಾತ್ರದ ಜನರು ಆತಂಕದಲ್ಲಿದ್ದಾರೆ.

ಅಲ್ಲಿನ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹವಾಮಾನ ಇಲಾಖೆಯಿಂದ ಪ್ರತೀ ಗಂಟೆಗೆ 55 ಕಿ.ಮೀ ಗಾಳಿಯ ಎಚ್ಚರಿಕೆ ನೀಡಲಾಗಿದೆ.

ಗಾಳಿ ಮಳೆಗೆ ನಿನ್ನೆ ರಾತ್ರಿಯಿಂದಲೂ ಬ್ರಹ್ಮಾವರ, ಉಡುಪಿ, ಕಾರ್ಕಳ, ಹೆಬ್ರಿ ತಾಲೂಕಿನಾದ್ಯಂತ ವಿದ್ಯುತ್ ವ್ಯತ್ಯಯವಾಗಿದ್ದು, ಕಡಲತೀರದಲ್ಲಿ ಅತೀ ದೊಡ್ಡ ಚಂಡಮಾರುತದ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಗೆ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.