ಕೊಪ್ಪಳ: ಮುಖ್ಯಮಂತ್ರಿಗಳು ತಮಗೆ ಭದ್ರತೆ ಇಲ್ಲ ಎನ್ನುತ್ತಿದ್ದಾರೆ. ಆದ್ದರಿಂದ ಸಿಎಂ ರಾಜಿನಾಮೆ ನೀಡಲಿ ಎಂದು ಶಾಸಕ ಗಾಲಿ ಜನಾರ್ದನ್ ರೆಡ್ಡಿ ಹೇಳಿದ್ದಾರೆ.
ಗಂಗಾವತಿಯಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹೋರಾಟ ನಡೆಸಿದ್ದ ವೇಳೆ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ. ಕರ್ನಾಟಕದಲ್ಲಿ ಅಶಾಂತಿ ಮೂಡಿಸುವಂತಹ ಕೃತ್ಯ ನಡೆಯುತ್ತಿದೆ. ಮುಸ್ಲಿಂರಿಗೆ ಮೀಸಲಾತಿ ನೀಡಿ ಜಾತಿ ಜಾತಿಗಳ ಮಧ್ಯೆ ದ್ವೇಷ ಹುಟ್ಟುವಂತೆ ಸರ್ಕಾರದಿಂದ ಮಾಡಲಾಗಿದೆ. ಕಾಶ್ಮೀರದಲ್ಲಿ ನರಮೇಧ ನಡೆದರೂ ಯುದ್ದ ಬೇಡ ಎನ್ನುತ್ತಾರೆ. ಸಿಎಂ ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಮುಂದುವರಿಯಬಾರದು ಎಂದು ಗೇಲಿ ಮಾಡಿದ್ದಾರೆ.