ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಪವಿತ್ರಾಗೌಡ ಸೇರಿದಂತೆ ಆರೋಪಿಗಳು ಇಂದು ಕೋರ್ಟ್ ಗೆ ಹಾಜರಾಗಿದ್ದಾರೆ.ಇಂದು 57ನೇ ಸಿಸಿಎಚ್ ಕೋರ್ಟ್ ಗೆ ಆರೋಪಿಗಳು ಹಾಜರಾಗಿದ್ದಾರೆ. ಪವಿತ್ರಾಗೌಡ ಅವರು ಕೋರ್ಟ್ ಒಳಗೆ ಹಾಜರಾಗಿದ್ದಾರೆ. ಕೋರ್ಟ್ ಹಾಲ್ ಹೊರಗಡೆ ದರ್ಶನ್ ನಿಂತಿದ್ದರು. ನಟ ದರ್ಶನ್ ಕೋರ್ಟ್ ಗೆ ಆಗಮಿಸುತ್ತಿದ್ದಂತೆ ಇನ್ನಿತರ ಆರೋಪಿಗಳ ಜೊತೆಗೆ ಮಾತನಾಡಿದ್ದಾರೆ. ಇಂದು ಬಹುತೇಕ ಎಲ್ಲ ಆರೋಪಿಗಳು ಕೋರ್ಟ್ ಗೆ ಹಾಜರಾಗಿದ್ದಾರೆ.