ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರರ ಜಾಮೀನು ಭವಿಷ್ಯ ಇಂದು(ಗುರುವಾರ,ಆ.14) ನಿರ್ಧಾರವಾಗಲಿದೆ.
ಸುಪ್ರೀಂ ಕೋರ್ಟ್ನ ನ್ಯಾಯಾಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಮಹದೇವನ್ ಅವರ ವಿಭಾಗೀಯ ನ್ಯಾಯಪೀಠ ದರ್ಶನ್ ಮತ್ತು ತಂಡದ ಜಾಮೀನು ಅರ್ಜಿ ಬಗ್ಗೆ ತೀರ್ಪು ಪ್ರಕಟಿಸಲಿದೆ.
ಕೆಲವು ದಿನಗಳಿಂದ ಪ್ರಕರಣ ಸಂಬಂಧ ವಾದ-ಪ್ರತಿವಾದ ಆಲಿಸಿದ್ದ ಸುಪ್ರೀಂ ಕೋರ್ಟ್ ತೀರ್ಪು ಕಾದಿರಿಸಿತ್ತು.