ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆಯಾಗಿ ಇಂದಿಗೆ ವರ್ಷ ಕಳೆದಿದೆ. ಪವಿತ್ರಾಗೆ ಅಶ್ಲೀಲ ಸಂದೇಶ ಕಳಿಸಿದ್ದರು ಎಂಬ ಕಾರಣಕ್ಕೆ ರೇಣುಕಾಸ್ವಾಮಿ ಕೊಲೆ ನಡೆದಿರುವ ಆರೋಪ ಕೇಳಿ ಬಂದಿದೆ. ದುರಂತ ನಡೆದು ಒಂದು ವರ್ಷ ಕಳೆದರೂ ರೇಣುಕಾಸ್ವಾಮಿ ಪೋಷಕರು ಕಣ್ಣೀರಿಡುತ್ತಿದ್ದಾರೆ.
ಪುತ್ರ ರೇಣುಕಾಸ್ವಾಮಿ ಫೋಟೋಗೆ ಎಡೆ ಇಟ್ಟು ಶ್ರದ್ಧಾಂಜಲಿ ಸಲ್ಲಿಸಿ ಪುತ್ರ ಶೋಕ ನಿರಂತರವಾದದ್ದು ಅಂತಾ ಪುತ್ರನ ನೆನೆದು ತಂದೆ ಕಾಶಿನಾಥ ಶಿವನಗೌಡ್ರು ಭಾವುಕರಾಗಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸಿಲ್ಲ ಅಂತಾ ನೊಂದು ನುಡಿದಿದ್ದಾರೆ. ಈ ವೇಳೆ ಮಗನ ಕೊಲೆ ಕೇಸ್ ನ್ನು ಫಾಸ್ಟ್ ಟ್ರಾಕ್ ಮೂಲಕ ನಡೆಸಬೇಕು ಅಂತಾ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಮಾನವೀಯ ನೆಲೆಗಟ್ಟಿನಲ್ಲಿ ನಮ್ಮ ಸೊಸೆಗೆ ನೌಕರಿ ವ್ಯವಸ್ಥೆ ಮಾಡಬೇಕು ಅಂತಾ ಮನವಿ ಮಾಡಿದ್ದಾರೆ. ಪುತ್ರನ ಸಾವಿನ ವಿಷಯದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ನಟ ದರ್ಶನ್ ಜೈಲಿಂದ ರಿಲೀಸ್ ಆದಮೇಲೆ ನಮ್ಮನ್ನು ಯಾರೂ ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ.
ಮೃತ ರೇಣುಕಾಸ್ವಾಮಿ ತಾಯಿ ರತ್ನಪ್ರಭಾ ಕೂಡ ತಮ್ಮ ದುಃಖವನ್ನ ತೋಡಿಕೊಂಡಿದ್ದಾರೆ.. ಮಗನನ್ನು ಕಳೆದುಕೊಂಡು ದುಃಖದಲ್ಲಿದ್ದೇವೆ. ಆ ನೋವು ಮರೆಯಲು ಸಾಧ್ಯವಾಗುತ್ತಿಲ್ಲ. ಸರ್ಕಾರ ನನ್ನ ಸೊಸೆ ಭವಿಷ್ಯಕ್ಕೆ ಒಂದು ನೌಕರಿ ಕೊಡಬೇಕು ಅಂತಾ ಕೋರಿಕೆ ಇಟ್ಟಿದ್ದಾರೆ.