ಪಹಲ್ಗಾಮ್ ದಾಳಿ ಬೆನ್ನಲ್ಲೇ ಜಮ್ಮು-ಕಾಶ್ಮೀರ ಸರ್ಕಾರ ಕೆಲ ದಿಟ್ಟ ಕ್ರಮಗಳನ್ನು ಕೈಗೊಂಡಿದೆ. ದಾಳಿ ನಡೆದ ವ್ಯಾಪ್ತಿಯ 48ಕ್ಕೂ ಹೆಚ್ಚು ರೆಸಾರ್ಟ್ ಗಳನ್ನು ಬಂದ್ ಮಾಡಲು ಆದೇಶಿಸಲಾಗಿದೆ. ಅಷ್ಟೇ ಅಲ್ಲಾ 6ಕ್ಕೂ ಅಧಿಕ ಪ್ರವಾಸಿ ತಾಣಗಳ ಪ್ರವೇಶಕ್ಕೂ ಸರ್ಕಾರ ನಿರ್ಬಂಧ ಹೇರಿದೆ.
ರಾಜ್ಯದೆಲ್ಲೆಡೆ ಉಗ್ರರಿಗಾಗಿ ಬೇಟೆ ಮುಂದುವರಿದಿರುವ ಬೆನ್ನಲ್ಲೇ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರೆಸಾರ್ಟ್ ಹಾಗೂ ಪ್ರವಾಸಿ ತಾಣಗಳನ್ನು ಬಂದ್ ಮಾಡಲಾಗಿದ್ದು, ಕಣಿವೆಯಲ್ಲಿ ಶಾಂತಿ ನೆಲೆಗೊಳಿಸಿ, ಸಹಜ ಸ್ಥಿತಿಗೆ ಮರಳಲು ಅನುವಾಗುವಂಥಾ ಕ್ರಮಗಳಿಗೆ ಓಮರ್ ಸರ್ಕಾರ ಮುಂದಾಗಿದೆ.