ಅತಿವೇಗವಾಗಿ ಬಂದು ಬೈಕ್ ಸವಾರನಿಗೆ ಸ್ಕೂಲ್ ವ್ಯಾನ್ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಸಿನಿಮೀಯ ರೀತಿಯಲ್ಲಿ ನಡೆದ ಅಪಘಾತದಲ್ಲಿ ಅದೃಷ್ಟವಶಾತ್ ಬೈಕ್ ಸವಾರ ಪಾರಾಗಿದ್ದಾರೆ. ಮಹದೇವಪುರ ಸಂಚಾರ ಠಾಣಾ ವ್ಯಾಪ್ತಿಯ ಕನ್ನಮಂಗಲ ಗೇಟ್ ಬಳಿ ಈ ಘಟನೆ ನಡೆದಿದೆ.
ಕನ್ನಮಂಗಲ ಗೇಟ್ ಮೂಲಕ ವೈಟ್ ಪೀಲ್ಡ್ ಕಡೆ ಬರುತ್ತಿದ್ದ ಸ್ಕೂಲ್ ವ್ಯಾನ್, ವೇಗವಾಗಿ ಬಂದು ಸಿಗ್ನಲ್ ಬಳಿ ನಿಯಂತ್ರಣ ಸಿಗದೆ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಮುಂದೆ ಬರುತ್ತಿದ್ದ ಕಾರಿಗೂ ಡಿಕ್ಕಿ ಹೊಡೆದು ನಿಂತಿದೆ. ವಾಹನ ಸವಾರ ಸಣ್ಣಪುಟ್ಟ ಗಾಯಗಳಿಂದ ಬಚಾವ್ ಆಗಿದ್ದಾರೆ. ಈ ಕುರಿತು ಮಹಾದೇವಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.