ಬಾಂಗ್ಲಾ ವಿರುದ್ಧದ ಪಂದ್ಯದಕ್ಕಾಗಿ ಅಭ್ಯಾಸ ನಡೆಸುವ ವೇಳೆ ಗಾಯಗೊಂಡ ರಿಷಭ್ ಪಂತ್(Rishabh Pant) ಅವರು ಚಾಂಪಿಯನ್ಸ್ ಟ್ರೋಫಿಯಿಂದ(Champions Trophy) ಹೊರಬೀಳುತ್ತಾರೆಯೇ ಎಂಬ ಅನುಮಾನ ಮೂಡಿದೆ. ಪಂತ್ ಸ್ಥಾನಕ್ಕೆ ಮೂವರು ಆಟಗಾರರ ಹೆಸರನ್ನು ಬಿಸಿಸಿಐ ಶಾರ್ಟ್ ಲೀಸ್ಟ್ ಮಾಡಿದೆ ಎಂದು ಹೇಳಲಾಗಿದೆ. ಶಿವಂ ದುಬೆ, ರಿಯಾನ್ ಪರಾಗ್ ಮತ್ತು ಇಶಾನ್ ಕಿಶನ್ ಪಟ್ಟಿಯಲ್ಲಿದ್ದಾರೆ .
ಪಂತ್ ಕಳೆದ ಭಾನುವಾರ ಫೀಲ್ಡಿಂಗ್ ಅಭ್ಯಾಸ ನಡೆಸುತ್ತಿದ್ದ ವೇಳೆ ಅವರ ಮಂಡಿಗೆ ಚೆಂಡು ಬಡಿದಿತ್ತು. ಕೂಡಲೇ ಅವರನ್ನು ವೈದ್ಯಕೀಯ ತಂಡ ಉಪಚರಿಸಿತ್ತುಚಿಕಿತ್ಸೆ ಬಳಿಕ ಪಂತ್ ಅಭ್ಯಾಸ ಮಾಡಿಲ್ಲ. ಅಪಘಾತದಲ್ಲಿ ಗಾಯಗೊಂಡು ಶಸ್ತ್ರಚಿಕಿತ್ಸೆ ಮಾಡಿಸಿದ್ದ ಕಾಲಿಗೆ ಮತ್ತೆ ಗಾಯಗೊಂಡ ಕಾರಣ ಬಿಸಿಸಿಐ ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಚಾಂಪಿಯನ್ಸ್ ಟ್ರೋಫಿ ತಂಡದಿಂದ ಕೈಬಿಡಲಿದೆ ಎಂದು ಹೇಳಲಾಗಿದೆ.
2023ರ ಏಕದಿನ ವಿಶ್ವಕಪ್ ವೇಳೆ ಪಂತ್ ಅಲಭ್ಯರಾಗಿದ್ದಾಗ ಇಶಾನ್ ಕಿಶನ್ ತಂಡದ ಬ್ಯಾಕ್ ಆಪ್ ಕೀಪರ್ ಆಗಿ ಆಯ್ಕೆಯಾಗಿದ್ದರು. ಕೆ.ಎಲ್ ರಾಹುಲ್ ಸಂಪೂರ್ಣವಾಗಿ ಕೀಪಿಂಗ್ ನಡೆಸಿದ್ದರು. ಚಾಂಪಿಯನ್ಸ್ ಟ್ರೋಫಿಯಲ್ಲಿಯೂ ರಾಹುಲ್ ಮೊದಲ ಆಯ್ಕೆಯ ಕೀಪರ್ ಆಗಿದ್ದಾರೆ. ಸಂಜು ಸ್ಯಾಮ್ಸನ್ ಕೂಡ ಗಾಯದಿಂದ ಬಳಲುತ್ತಿದ್ದಾರೆ. ರಣಜಿ ಅಭ್ಯಾಸ ವೇಳೆ ಮೊಣಕೈ ಗಾಯಕ್ಕೆ ತುತ್ತಾಗಿದ್ದರು.
ಇಂದು ಭಾರತ-ಬಾಂಗ್ಲಾ ಮೊದಲ ಫೈಟ್
ರೋಹಿತ್ ಶರ್ಮ ಸಾರಥ್ಯದ ಭಾರತ ತಂಡ ಇಂದು ದುಬೈ ಅಂಗಳದಲ್ಲಿ ನೆರೆಯ ರಾಷ್ಟ್ರವಾದ ಬಾಂಗ್ಲಾದೇಶ ವಿರುದ್ಧ ಆಡಲಿದೆ. ಈ ಮೂಲಕ ತನ್ನ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ. ಇತ್ತಂಡಗಳು ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಇದುವರೆಗೂ ಕೇವಲ ಒಂದು ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಗೆಲುವು ಸಾಧಿಸಿದೆ.
ಏಕದಿನ ಮಾದರಿಯಲ್ಲಿ ಉಭಯ ತಂಡಗಳು 41 ಪಂದ್ಯಗಳನ್ನಾಡಿದೆ. ಈ ಪೈಕಿ ಭಾರತ ಗರಿಷ್ಠ 32 ಪಂದ್ಯ ಗೆದ್ದರೆ, ಬಾಂಗ್ಲಾದೇಶ 8 ಪಂದ್ಯ ಗೆದ್ದಿದೆ. ಒಂದು ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.
ಭಾರತ ತಂಡ
ರೋಹಿತ್ ಶರ್ಮ (ನಾಯಕ), ಶುಭಮಾನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿ.ಕೀ), ರಿಷಭ್ ಪಂತ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಮೊಹಮದ್ ಶಮಿ, ಅರ್ಷದೀಪ್ ಸಿಂಗ್.