ಉಡುಪಿ : ಕಾರಿನ ಕಿಟಕಿ ಗಾಜು ಒಡೆದು 2ಲಕ್ಷ ದೋಚಿ, ಪರಾರಿಯಾದ ಖದೀಮರು ಹಾಡಹಗಲೇ ಕಾರಿನ ಕಿಟಕಿ ಗಾಜು ಒಡೆದು ಒಳಗಿದ್ದ ಲಕ್ಷಾಂತರ ರೂ. ನಗದು ಹಣ ದೋಚಿ ಪರಾರಿಯಾದ ಘಟನೆ ಮಂಗಳವಾರ ಸಂಜೆ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ತಲ್ಲೂರು ಎಂಬಲ್ಲಿ ನಡೆದಿದೆ.
ಕೆಂಚನೂರು ನಿವಾಸಿ ಗುತ್ತಿಗೆದಾರರಾಗಿರುವ ಗುಂಡು ಶೆಟ್ಟಿ ಎಂಬವರು ತಲ್ಲೂರಿನ ಬ್ಯಾಂಕಿನಲ್ಲಿ 2ಲಕ್ಷ ರೂ. ಹಣವನ್ನು ಪಡೆದು, ಕಾರಿನೊಳಗೆ ಇಟ್ಟಿದ್ದರು. ಬಳಿಕ ಅವರು ಕಾರನ್ನು ತಲ್ಲೂರು ಪೇಟೆ ಸಮೀಪದ ವಸತಿ ಸಂಕೀರ್ಣವೊಂದರ ಎದುರು ನಿಲ್ಲಿಸಿ ಬಾಡಿಗೆ ಮನೆಗೆ ತೆರಳಿದ್ದರು. ನಂತರ 10-15 ನಿಮಿಷ ಕಳೆದು ವಾಪಾಸ್ಸು ಬಂದು ನೋಡಿದಾಗ ಖದೀಮರು ಕಾರಿನ ಕಿಟಕಿ ಗಾಜು ಒಡೆದು ಹಣ ದೋಚಿ ಪರಾರಿಯಾಗಿರುವುದು ತಿಳಿದುಬಂದಿದೆ.
ಸದ್ಯ ಜನನಿಬೀಡ ಪ್ರದೇಶದಲ್ಲಿ ಹಾಡಹಗಲೇ ಈ ಘಟನೆ ನೆಡೆದಿದ್ದು ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ. ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂಓದಿ : ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ.. 31 ಡಿವೈಎಸ್ಪಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ



















