ಬೆಂಗಳೂರು : ನಗರದ ಯಶವಂತಪುರ–ಗೊರಗುಂಟೆಪಾಳ್ಯ ರಸ್ತೆಯಲ್ಲಿ ಆಂಬ್ಯುಲೆನ್ಸ್ ಮುಂದೆಯೇ ವ್ಹೀಲಿಂಗ್ ಮಾಡಿ ಪುಂಡರು ಹುಚ್ಚಾಟ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ.
ಜುಲೈ 4ರಂದು ಮಧ್ಯರಾತ್ರಿ ಸುಮಾರು 2 ಗಂಟೆಗೆ ಈ ಘಟನೆ ನಡೆದಿದ್ದು, ಆಂಬ್ಯುಲೆನ್ಸ್ನಲ್ಲಿ ರೋಗಿಯೊಬ್ಬರು ಜೀವಕ್ಕಾಗಿ ಹೋರಾಡುತ್ತಿದ್ದರೂ, ಕೆಲ ಪುಂಡ ಯುವಕರು ಬೈಕ್ನಲ್ಲಿ ವ್ಹೀಲಿಂಗ್ ಮಾಡುತ್ತಾ ದಾರಿ ಬಿಡದೆ ಹುಚ್ಚಾಟ ಮರೆದಿದ್ದಾರೆ.
ಘಟನೆಯ ದೃಶ್ಯವನ್ನು ಆಂಬ್ಯುಲೆನ್ಸ್ನಲ್ಲಿದ್ದ ರೋಗಿಯ ಕುಟುಂಬಸ್ಥರು ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪುಂಡರ ಬೇಜವಾಬ್ದಾರಿತನದ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ವಿಡಿಯೋದಲ್ಲಿ ವ್ಹೀಲಿಂಗ್ ಮಾಡಿದ ಬೈಕ್ಗೆ ನಂಬರ್ ಪ್ಲೇಟ್ ಇಲ್ಲದಿರುವುದು ಹಾಗೂ ಸವಾರ ಹೆಲ್ಮೆಟ್ ಧರಿಸದೇ ಇರುವುದೂ ಕಂಡುಬಂದಿದೆ. ಇಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಮಂಗಳೂರಲ್ಲಿ ಚಿನ್ನದ ವ್ಯಾಪಾರಿ ದರೋಡೆ ಕೇಸ್ : 13 ಆರೋಪಿಗಳ ಫೋಟೋ ರಿಲೀಸ್.. ಸುಳಿವು ಕೊಟ್ರೆ ಬಹುಮಾನ!



















