ಬೆಂಗಳೂರು : ಸಮಗ್ರ ಶಿಕ್ಷಣ ಕರ್ನಾಟಕ (SSK) ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ನಿರ್ವಹಣೆಗಾಗಿ 7 ಬ್ಲಾಕ್ ಸಂಪನ್ಮೂಲ ಕೇಂದ್ರಗಳಿಗೆ ತಲಾ ಒಬ್ಬರಂತೆ ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿಗಳ (Consultant/Academic Resource Person) ನೇಮಕಾತಿ ಪ್ರಕ್ರಿಯೆ (Samagra Shikshana Dharwad Recruitment 2026) ಆರಂಭವಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನೇಮಕಾತಿ ಸಂಸ್ಥೆ: ಸಮಗ್ರ ಶಿಕ್ಷಣ ಧಾರವಾಡ
ಹುದ್ದೆಗಳ ಹೆಸರು: ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ
ಹುದ್ದೆಗಳ ಸಂಖ್ಯೆ: 7
ಉದ್ಯೋಗ ಸ್ಥಳ: ಧಾರವಾಡ
ಅರ್ಜಿ ಸಲ್ಲಿಸುವ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 17
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಎ, ಎಂಎಸ್ಸಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ dharwad.nic.in ಗೆ ಭೇಟಿ ನೀಡಬೇಕು. ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಅರ್ಜಿ ಹಾಗೂ ದಾಖಲೆಗಳನ್ನು ಧಾರವಾಡದ ಸಮಗ್ರ ಶಿಕ್ಷಣ ಇಲಾಖೆ ಕಚೇರಿಗೆ ಪೋಸ್ಟ್ ಮಾಡಬೇಕು ಎಂದು ತಿಳಿಸಲಾಗಿದೆ.
ಧಾರವಾಡ ಜಿಲ್ಲೆಯ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2026-27ನೇ ಸಾಲಿಗೆ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸುವುದು ನೇಮಕಾತಿ ಹೊಂದಿದವರ ಕರ್ತವ್ಯವಾಗಿದೆ. ಮಾನಸಿಕ ಆರೋಗ್ಯ ನಿರ್ವಹಿಸಲು, ವಿದ್ಯಾರ್ಥಿಗಳ ಭಾವನಾತ್ಮಕ, ಮಾನಸಿಕ ಹಾಗೂ ಸಾಮಾಜಿಕ ಯೋಗಕ್ಷೇಮವನ್ನು ಉತ್ತೇಜಿಸುವುದು ಯೋಜನೆಯ ಉದ್ದೇಶವಾಗಿದೆ.
ಹೆಚ್ಚಿನ ಮಾಹಿತಿಗೆ ಎಸ್.ಎಂ. ಹುಡೇದಮನಿ ಡಿ.ವೈ.ಪಿ.ಸಿ ಆರ್.ಎಂ.ಎಸ್., ಧಾರವಾಡ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ-9880984396, 9741177623.
ಇದನ್ನೂ ಓದಿ : ಸರ್ಕಾರಿ ಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ : ಪರೀಕ್ಷೆ ದಿನಾಂಕವೂ ಪ್ರಕಟ



















