ಸತೀಶ್ ನೀನಾಸಂ ನಟಿಸುತ್ತಿರುವ ‘ಅಶೋಕ ಬ್ಲೇಡ್’ ಚಿತ್ರ ಈಗ ‘ದ ರೈಸ್ ಆಫ್ ಅಶೋಕ’ ಎಂದು ಶೀರ್ಷಿಕೆಯಿಂದ ಮತ್ತೆ ಸೆಟ್ಟೇರುತ್ತಿದೆ. ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆ ನಂತರ ಚಿತ್ರ ನಿಂತು ಹೋಗಿತ್ತು. ಆದರೆ, ಈಗ ಮತ್ತೆ ಕೈಗೆತ್ತಿಕೊಳ್ಳಲಾಗಿದೆ.
‘ಕ್ಷೇತ್ರಪತಿ’, ‘ಅವತಾರ ಪುರುಷ’ ಸೇರಿದಂತೆ ಹಲವು ಚಿತ್ರಗಳಿಗೆ ಸಂಕಲನಕಾರರಾಗಿದ್ದ ಮನು ಶೆಡ್ಗಾರ್ ಈ ಚಿತ್ರದ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ‘ಜ.10ರಂದು ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿ, ಫೆ. 15ರಿಂದ ಚಿತ್ರೀಕರಣ ಮುಂದುವರಿಸುತ್ತೇವೆ. ಶೀಘ್ರದಲ್ಲಿ ಚಿತ್ರವನ್ನು ತೆರೆಗೆ ತರುವ ಆಲೋಚನೆಯಿದೆ. ನನ್ನ ವೃತ್ತಿ ಜೀವನದಲ್ಲಿ ಅತ್ಯುತ್ತಮ ಸಿನಿಮಾವಿದು. ಕಂಟೆಂಟ್ ಅಷ್ಟು ಅದ್ಭುತವಾಗಿದೆ. ಮೂರು ಭಾಷೆಗಳಲ್ಲಿ ಚಿತ್ರ ನಿರ್ಮಾಣವಾಗುತ್ತಿದ್ದು ವಿನೋದ್ ಕನಸಿನ ಚಿತ್ರವಾಗಿತ್ತು. ಹೀಗಾಗಿ ಈ ಸಿನಿಮಾ ಪೂರ್ಣಗೊಳಿಸಬೇಕೆಂದು ಪಣತೊಟ್ಟು ಮುಂದುವರಿಸುತ್ತಿದ್ದೇವೆ’ಎಂದು ಸತೀಶ್ ಹೇಳಿದ್ದಾರೆ.
ಮಹೇಶ್ ನಿರ್ದೇಶಿಸುತ್ತಿರುವ, ರಚಿತಾ ರಾಮ್ ನಾಯಕಿಯಾಗಿರುವ ‘ಅಯೋಗ್ಯ 2’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿರುವೆ. ಅದರ ಮೊದಲ ಹಂತದ ಚಿತ್ರೀಕರಣ ಮುಗಿಯುತ್ತಿದ್ದಂತೆ ಈ ಚಿತ್ರ ಕೈಗೆತ್ತಿಕೊಳ್ಳುತ್ತೇವೆ. ಎಂದಿದ್ದಾರೆ. ಬಿ.ಸುರೇಶ್, ಗೋಪಾಲ ದೇಶಪಾಂಡೆ ಮೊದಲಾದವರು ತಾರಾಗಣದಲ್ಲಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಸಂಗೀತ, ಲವಿತ್ ಛಾಯಾಚಿತ್ರಗ್ರಹಣವಿದೆ.