ಧಾರವಾಡ : ಧಾರವಾಡದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(MGNREGA) ಉಳಿಸುವಂತೆ ಆಗ್ರಹಿಸಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ, ನರೇಗಾ ಯೋಜನೆಯ ಹೆಸರನ್ನು ಬದಲಾಯಿಸಬಾರದು ಎಂದು ಒತ್ತಾಯಿಸಿದರು. ಮಹಾತ್ಮ ಗಾಂಧೀಜಿ ಅವರ ಹೆಸರನ್ನೇ ಮುಂದುವರೆಸಬೇಕು. ಕೇಂದ್ರ ಸರ್ಕಾರ ಹೊಸ ಹೆಸರು ನೀಡುವ ಪ್ರಯತ್ನ ಕೈಬಿಡಬೇಕು ಎಂದು ಆಗ್ರಹಿಸಿದರು.
ಈ ಹೋರಾಟದಲ್ಲಿ ರಾಜ್ಯ ನೀರು ಸರಬರಾಜು ಹಾಗೂ ಒಳಚರಂಡಿ ನಿಗಮದ ಅಧ್ಯಕ್ಷೆ ಶಿವಲೀಲಾ ಕುಲಕರ್ಣಿ ಪಾಲ್ಗೊಂಡಿದ್ದಲ್ಲದೇ ಕಾಂಗ್ರೆಸ್ ಪಕ್ಷದ ಹಲವು ಕಾರ್ಯಕರ್ತರು ಭಾಗಿಯಾಗಿದ್ದರು.
ಇದನ್ನೂ ಓದಿ : ಹುಬ್ಬಳ್ಳಿಯಲ್ಲಿ ಪೆನ್ಷನ್ ಹೆಚ್ಚಳಕ್ಕೆ ಆಗ್ರಹ | ಭಜನೆ ಹಾಡು ಹಾಡಿ ವಿನೂತನ ಪ್ರತಿಭಟನೆ



















