ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir)ಲ್ಲಿ ಭದ್ರತಾ ಪಡೆ ಮೂವರು ಉಗ್ರರನ್ನು ಬಲಿ ಪಡೆದಿದೆ.
ದೋಡಾ ಜಿಲ್ಲೆಯ ಗಂಡೋ ಪ್ರದೇಶದಲ್ಲಿ ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳ (Indian Army) ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಉಗ್ರರನ್ನು ಬಲಿ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಹತ್ಯೆಗೀಡಾದ ಉಗ್ರರು ಇತ್ತೀಚೆಗೆ ಕಾಶ್ಮೀರದಲ್ಲಿ ಸೇನೆ ಮತ್ತು ಪೊಲೀಸರ ಮೇಲೆ ನಡೆದ ದಾಳಿಯಲ್ಲಿ ಉಗ್ರರು ಭಾಗಿಯಾಗಿದ್ದರು ಎನ್ನಲಾಗಿದೆ. ಎನ್ಕೌಂಟರ್ (Encounter) ನಡೆದ ಜಾಗದಿಂದ ಅಮೆರಿಕ ನಿರ್ಮಿತ ಎಂ4 ಕಾರ್ಬೈನ್ ಗನ್ ಸೇರಿದಂತೆ ಅಪಾರ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೂವರು ಭಯೋತ್ಪಾದಕರು ಅಡಗಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಭಯೋತ್ಪಾದಕರ ಸರಣಿ ದಾಳಿಯ ನಂತರ ದೋಡಾ ಮತ್ತು ರಾಜೌರಿ, ಪೂಂಚ್ ಪ್ರದೇಶಗಳಲ್ಲಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಜೂ.11 ರಂದು, ಸೇನಾ ಶಿಬಿರದ ಮೇಲೆ ದಾಳಿ ನಡೆಸಲಾಗಿತ್ತು. ಇದರಲ್ಲಿ ಐವರು ಸೈನಿಕರು ಮತ್ತು ವಿಶೇಷ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದರು. ಮತ್ತೊಂದು ಪ್ರಕರಣದಲ್ಲಿ ಪೊಲೀಸ್ ಶಿಬಿರದ ಮೇಲೆ ದಾಳಿ ಮಾಡಿದ್ದರು. ಅಲ್ಲದೇ, ಭಯೋತ್ಪಾದಕರಿಗೆ ಆಹಾರ ಹಾಗೂ ಆಶ್ರಯ ಒದಗಿಸಿದ್ದ ಮೂವರು ಸ್ಥಳೀಯರನ್ನು ಕೂಡ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
