ಬೆಂಗಳೂರು: ಯುದ್ದ ಅಗತ್ಯ ಇಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಚೀಫ್ ಮಿನಿಸ್ಟರ್ ಏನು ಹೇಳಿದ್ದಾರೋ ಅದಕ್ಕೆ ಅವರ ಬಳಿಯೇ ಕ್ಲಾರಿಫಿಕೇಶನ್ ತೆಗೆದುಕೊಳ್ಳಬೇಕು. ಅದು ಸೂಕ್ತ ಎಂದು ಹೇಳಿದ್ದಾರೆ.
ಇದೇ ವೇಳೆ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ವಿಚಾರವಾಗಿ ಮಾತನಾಡಿ, ನಾಡಿದ್ದು ಬೆಳಗಾವಿಯಲ್ಲಿ ಬೆಲೆಏರಿಕೆ ಹಾಗೂ ಸಂವಿಧಾನ ಬಚಾವೋ ಪ್ರತಿಭಟನೆ ನಡೆಸಲಿದ್ದೇವೆ. ನಮ್ಮ ರಾಷ್ಟ್ರೀಯ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ನಮ್ಮ ಪಕ್ಷ ತೀರ್ಮಾನ ಮಾಡಿದ್ದು, ದೇಶದ ಐಕ್ಯತೆ ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಣಯಕ್ಕೆ ನಾವು ಬದ್ದರಾಗಿದ್ದೇವೆ. ನಮ್ಮ ವರ್ಕಿಂಗ್ ಕಮೀಟಿ ತಗೆದುಕೊಂಡ ನಿರ್ಣಯಕ್ಕೆ ನಾವೂ ಬದ್ದರಾಗಿದ್ದೇವೆ ಎಂದು ಡಿಕೆಶಿ ಹೇಳಿದ್ದಾರೆ.