ಬೈಂದೂರು(ಉಡುಪಿ) : ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ಯುವಮೋರ್ಚಾ ನೇತ್ರತ್ವದಲ್ಲಿ ಇದೇ ಬರುವ ಸೆಪ್ಟೆಂಬರ್ 27 (ಶನಿವಾರ)ರಂದು ಬೃಹತ್ ರಕ್ತದಾನ ಶಿಬಿರ ನೆಡೆಯಲಿದೆ.
ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ 75ನೇ ವರ್ಷದ ಹುಟ್ಟುಹಬ್ಬದ ಆಚರಣೆಯ ಅಂಗವಾಗಿ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ,ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆಯವರ ಘನ ಉಪಸ್ಥಿತಿಯಲ್ಲಿ ನೆರೆವೇರಲಿದೆ.
ಸೆಪ್ಟೆಂಬರ್ 27ರ ಬೆಳಿಗ್ಗೆ 9 ಗಂಟೆಯಿಂದ ರೋಟರಿ ಭವನ ಬೈಂದೂರಿನಲ್ಲಿ ರಕ್ತದಾನ ಶಿಬಿರ ಆರಂಭವಾಗಲಿದ್ದು, ಆಸಕ್ತರು ಜೀವ ಉಳಿಸುವಂತಹ ರಕ್ತದಾನದ ಮಹತ್ಕಾಯರ್ಯದಲ್ಲಿ ಭಾಗವಹಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.



















