ಮಂಡ್ಯ : ಅಂಗಡಿ ಮತ್ತು ಹೋಟೇಲ್ ಬೀಗ ಮುರಿದು ಒಳ ನುಗ್ಗಿದ ಖದೀಮರು ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.
ಮಂಡ್ಯದ ಮದ್ದೂರು ಪಟ್ಟಣದ ಹಳೇ ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಹೆದ್ದಾರಿ ಬದಿಯ ಅಕುಲ್ ಟೀ ಸ್ಟಾಲ್ ಹಾಗೂ ಹೋಟೆಲ್ ಗೆ ತಡರಾತ್ರಿ ನುಗ್ಗಿದ ಖದೀಮರು, ಗಲ್ಲಾ ಪೆಟ್ಟಿಗೆಯಲ್ಲಿದ್ದ ಹಣ, ಸಿಗರೇಟ್, ಚಾಕಲೇಟ್ಸ್ ದೋಚಿ ಪರಾರಿಯಾಗಿದ್ದಾರೆ. ಅಲ್ಲದೇ, ಹೋಟೆಲ್ ಗೆ ನುಗ್ಗಿ ಅಲ್ಲೇ ಅಡುಗೆ ಮಾಡಿ ಊಟ ಮಡಿದ್ದಾರೆ.
ಸ್ಥಳಕ್ಕೆ ಮದ್ದೂರು ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.