ಚಂಡೀಗಢ: ಹರಿಯಾಣದಲ್ಲಿ ಮುಸ್ಲಿಂ ಮೀಸಲಾತಿಗೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ.
ಹರಿಯಾಣದಲ್ಲಿ ನಡೆದ ‘ಹಿಂದುಳಿದ ವರ್ಗಗಳ ಸಮ್ಮಾನ್ ಸಮ್ಮೇಳನ’ ಉದ್ಧೇಶಿಸಿ ಮಾತನಾಡಿದ ಅವರು, ಒಬಿಸಿ ಮೀಸಲಾತಿಗೆ ಸಂಬಂಧಿಸಿದಂತೆ ಕಾಕಾ ಕಾಲೇಕರ್ ಆಯೋಗ ಮಾಡಿದ ಶಿಫಾರಸುಗಳನ್ನು ಕಾಂಗ್ರೆಸ್ ವರ್ಷಗಳಿಂದ ಜಾರಿಗೆ ತಂದಿಲ್ಲ ಎಂದು ಕಿಡಿಕಾರಿದ್ದಾರೆ.

ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂದುಳಿದ ವರ್ಗಗಳಿಗೆ ನೀಡಿರುವ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲಿದೆ. 1980 ರಲ್ಲಿ, (ಅಂದಿನ ಪ್ರಧಾನಿ) ಇಂದಿರಾಗಾಂಧಿ ಮಂಡಲ್ ಆಯೋಗ ಕೋಲ್ಡ್ ಸ್ಟೋರೇಜ್ ಇಟ್ಟಿದ್ದರು. 1990 ರಲ್ಲಿ ಅದನ್ನು ಅಂಗೀಕರಿಸಿದಾಗ, ರಾಜೀವ್ ಗಾಂಧಿ ಅವರು ಎರಡೂವರೆ ಗಂಟೆಗಳ ಭಾಷಣ ನೀಡಿದರು ಹಾಗೂ ಒಬಿಸಿ ಮೀಸಲಾತಿ ವಿರೋಧಿಸಿದ್ದರು ಎಂದು ಆರೋಪಿಸಿದ್ದಾರೆ.
ಕರ್ನಾಟಕದಲ್ಲಿ ಕೂಡ ಕಾಂಗ್ರೆಸ್ ಒಬಿಸಿ ಮೀಸಲಾತಿ ಕಿತ್ತುಕೊಂಡು ಮುಸ್ಲಿಂರಿಗೆ ನೀಡಿದೆ ಎಂದು ವಾಗ್ದಾಳಿ ನಡೆಸಿದರು.