ನವದೆಹಲಿ: ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಎಕ್ಸ್ ಪೋಸ್ಟ್ ಮೂಲಕ ಪ್ರಧಾನಿ ಮೋದಿ ವಿರುದ್ಧ ಆರೋಪಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಭಾರತ ಮಾತೆ ಗೌರವಕ್ಕೆ ದ್ರೋಹ ಬಗೆದಿದ್ದಾರೆಂದು ಘೋಷಿಸೋಣವೇ? ಎಂದು ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.
ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿಯು(ಪಿಎಲ್ಎ) 60 ಕಿ.ಮೀ.ನಷ್ಟು ಭಾರತೀಯ ಭೂಪ್ರದೇಶಕ್ಕೆ ಪ್ರವೇಶಿಸಿ, ಬೀಡುಬಿಟ್ಟಿದೆ ಎಂಬ ಲೇಖನ ಉಲ್ಲೇಖಿಸಿ, ಮೋದಿಯು ಭಾರತ ಮಾತೆಯ ಗೌರವಕ್ಕೆ ದ್ರೋಹ ಬಗೆದಿದ್ದಾರೆ ಎಂದು ನಾವು ಘೋಷಿಸೋಣವೇ? ಎಂದು ಪ್ರಶ್ನಿಸಿದ್ದಾರೆ.
ಈ ಮೂಲಕ ಚೀನಾ ಜೊತೆಗಿನ ರಾಯಭಾರಿ ಮಟ್ಟದ ಸಂಬಂಧ ಕಡಿದುಕೊಳ್ಳಲು ಬಯಸುತ್ತೇನೆಂದು ಹೇಳಿದ್ದಾರೆ. ಮೋದಿ ಸರ್ಕಾರದ ವಿರುದ್ಧ ರಾಜ್ಯಸಭೆಯ ಮಾಜಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಟೀಕೆ ಮಾಡಿದ್ದರು. ಇತ್ತೀಚೆಗಷ್ಟೇ ಕೇಂದ್ರ ಸರ್ಕಾರದ ವಿದೇಶಿ ನೀತಿಯನ್ನು ಪ್ರಶ್ನಿಸಿದ್ದರು.
‘ಮಾಲ್ದಿವ್ಸ್ ಸಿಂಡ್ರೋಮ್’ ಬಾಂಗ್ಲಾದೇಶದಲ್ಲಿ ಮೌನವಾಗಿ ಹರಡುವುದು ಮುಂದುವರಿದಿದೆ ಮತ್ತು ಮೋದಿಯವರ ಪರಂಪರೆಯು ಭಾರತದ ವಿಘಟನೆಗಾಗಿ ಕೆಲಸ ಮಾಡುವ ನೆರೆಹೊರೆಯವರನ್ನು ಸೃಷ್ಟಿಸುತ್ತದೆ’ ಎಂಬ ಶೀರ್ಷಿಕೆಯ ಲೇಖನ ಹಂಚಿಕೊಂಡಿದ್ದರು.
ಈಗ ‘ಮುಂಬರುವ 25 ವರ್ಷಗಳ ‘ಅದ್ಭುತ’ ಮೋದಿ ಪರಂಪರೆ: ಭಾರತವನ್ನು ಸುತ್ತುವರೆದಿರುವ ನೆರೆಹೊರೆಯವರು ನಮ್ಮ ವಿಘಟನೆಗಾಗಿ ಕೆಲಸ ಮಾಡುತ್ತಾರೆ’ ಎಂದು ಬರೆದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.


















