ಶಿವಮೊಗ್ಗ: ಶರಾವತಿ ಪಂಪ್ಡ್ ಸ್ಟೋರೇಜ್ ನಿರ್ಮಾಣದ ಬಗ್ಗೆ ಹಿಂದಿನ ಸರ್ಕಾರದ ಅವಧಿಯಲ್ಲೇ ತೀರ್ಮಾನಿಸಲಾಗಿತ್ತು. ಬಿಜೆಪಿಯವರು ದುಡ್ಡು ಹೊಡೆಯುವ ಯೋಜನೆ ಇದಾಗಿತ್ತು. ಹಾಗಾಗಿ, ಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ.
ಬಡವರ ಬಂಧು, ಮಾಜಿ ಸಿಎಂ ದಿ. ಎಸ್. ಬಂಗಾರಪ್ಪನವರ 93 ನೇ ವರ್ಷದ ಜನುಮದಿನವನ್ನು ಸೊರಬದ ಬಂಗಾರಧಾಮದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಚಿವರಾದ ಸಂತೋಷ್ ಲಾಡ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.
ಈ ವೇಳೆ ಮಾದ್ಯಮ ವರದಿಗಾರರೊಂದಿಗೆ ಮಾತನಾಡಿದ ಗೋಪಾಲಕೃಷ್ಣ, ಶರಾವತಿ ಪಂಪ್ಡ್ ಸ್ಟೋರೇಜ್ ನಿರ್ಮಾಣದ ವಿಚಾರವಾಗಿ ಪ್ರತಿಭಟನೆ ನಡೆಸಲು ಸ್ವಾಮೀಜಿಗಳಿಗೆ, ಜನರಿಗೆ ಎಲ್ಲಾರಿಗೂ ಅವಕಾಶವಿದೆ.. ಈ ಯೋಜನೆಯಿಂದ ಏನು ಪರಿಣಾಮ ಆಗುತ್ತದೆ ಎಂಬುದು ಯಾರೂ ಹೇಳುತ್ತಿಲ್ಲ. ಈಗ ಇದರ ವಿರುದ್ಧ ಮಾತನಾಡುತ್ತಿದ್ದಾರೆ ಬಿಜೆಪಿಯವರಿಗೆ ದುಡ್ಡು ಹೊಡೆಯುವ ಕಲೆ ಗೊತ್ತು ಹಾಗಾಗಿ ಆರೋಪಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
1,465 ಮೆಗಾವ್ಯಾಟ್ ವಿದ್ಯುತ್ ತಯಾರಿಕ ಯೋಜನೆ ಇದಾಗಿದ್ದು, ಯಾವುದೇ ಯೋಜನೆ ಆದರೂ ಸ್ವಲ್ಪ ಮಟ್ಟಿನ ಅರಣ್ಯ ಹೋಗಿಯೇ ಹೋಗುತ್ತದೆ. ಯೋಜನೆ ಕೈಗೆತ್ತಿಕೊಂಡಾಗ ಸ್ವಲ್ಪ ಮಟ್ಟಿನ ಪರಿಸರ ಹಾನಿ ಆಗುತ್ತದೆ. ಆದರೆ ರೈತ ಸಂಘದ ಜೊತೆಗೆ ಕೂತು ಬಿಜೆಪಿಯವರು ಹೋರಾಟ ಮಾಡುವುದು ಎಷ್ಟು ಸರಿ? ಬಿಜೆಪಿಯವರು ಸುಮ್ಮನೇ ಸಾರ್ವಜನಿಕವಾಗಿ ಹೇಳಿಕೆ ನೀಡಿ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಈ ಬಾರಿ ಮಳೆಯಿಂದಾಗಿ ಹಲವಾರು ಜನರು ಮನೆ ಕಳೆದುಕೊಂಡಿದ್ದಾರೆ. ಮನೆ ಕಳೆದುಕೊಂಡವರಿಗೆ ಹಾಗೂ ಅಡಿಕೆ ಹಾನಿಯಾದ ರೈತರಿಗೆ ಪರಿಹಾರ ನೀಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ.
ರಾಜ್ಯ ರಾಜಕೀಯದಲ್ಲಿ ಸಿಎಂ ಉತ್ತರಾಧಿಕಾರಿ ವಿಚಾರವಾಗಿ ಮಾತನಾಡಿ, ಯತೀಂದ್ರ ಸಿದ್ಧರಾಮಯ್ಯನವರು, ಸಿದ್ಧರಾಮಯ್ಯ ರಾಜಕೀಯದ ಅಂತಿಮ ಘಟ್ಟದಲ್ಲಿದ್ದಾರೆಂದು ಎಂಬ ಹೇಳಿಕೆಯನ್ನು ಯಾಕೆ ಕೊಟ್ಟರು ಎಂದು ಗೊತ್ತಿಲ್ಲ. ಆದರೆ ನಮ್ಮಲ್ಲಿ ಮುಂದಿನ ಸಿಎಂ ಯಾರು ಎಂದು ಘೋಷಣೆ ಮಾಡುವುದು ನಮ್ಮ ರಾಷ್ಟ್ರೀಯ ನಾಯಕರು. ಹೈಕಮಾಂಡ್ ಆದೇಶದಂತೆ ನಾವು ನಡೆದುಕೊಳ್ಳುತ್ತೇವೆ. ನನಗೂ ಸಚಿವನಾಗಬೇಕೆಂಬ ಆಸೆ ಇದೆ ಕೊಟ್ಟು ಬಿಡುತ್ತಾರೆಯೇ!? ನಮ್ಮಲ್ಲಿ ಎಲ್ಲದಕ್ಕೂ ಕೇಂದ್ರ ನಾಯಕರು ಸೂಚನೆ ಕೊಡಬೇಕು. ಅವರ ಸೂಚನೆಯಂತೆ ನಮ್ಮ ನಿರ್ಧಾರ ಇರುತ್ತದೆ ಎಂದು ಹೇಳಿದ್ದಾರೆ.
ನಾನು ಸಿಎಂ ಆಗಬೇಕು ಎಂದು ಹೇಳುತ್ತೀನಿ ಮಾಡಿ ಬಿಡುತ್ತಾರಾ!? ಯಾರು ಯಾರೂ ಈ ರೀತಿ ಹೇಳಿಕೆ ನೀಡುತ್ತಾರೋ ಅದೆಲ್ಲಾ ಅವರ ವ್ಯಯಕ್ತಿಕ ಹೇಳಿಕೆ. ಆ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ. ಕೇಂದ್ರದ ವರಿಷ್ಠರ ತೀರ್ಮಾನಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ. ನಾನು ಯಾರ ಪರವಾಗಿಯೂ ಇಲ್ಲ, ನಾನು ಕಾಂಗ್ರೆಸ್ ಪಕ್ಷದ ಪರವಾಗಿದ್ದೇನೆ ಎಂದು ತಿಳಿಸಿದ್ದಾರೆ.
ಯತೀಂದ್ರ ಅವರು ಯಾಕೆ ಈ ರೀತಿ ಹೇಳಿದ್ದಾರೋ ಗೊತ್ತಿಲ್ಲ ಅದನ್ನು ಅವರಿಗೆ ಕೇಳಬೇಕು ಸಿದ್ಧರಾಮಯ್ಯನವರು ಒಳ್ಳೆಯ ಆಡಳಿತ ನೀಡಿದ್ದಾರೆ. ಈಗ ಅವರ ಮಗನೇ ಯಾಕೆ ಈ ರೀತಿ ಹೇಳಿದ್ದಾರೋ ಗೊತ್ತಿಲ್ಲ. ಅವರ ಮಗ ಹೇಳಿದ್ದು ನಡೆಯುವುದಿಲ್ಲ. ನಮ್ಮ ವರಿಷ್ಠರ ತೀರ್ಮಾನ ನಡೆಯುತ್ತೆ
ಸತೀಶ್ ಜಾರಕಿಹೊಳಿಯವರು ಈ ಹಿಂದಿನ ಚುನಾವಣೆಯಲ್ಲೇ ಹೇಳಿದ್ದರು 2028 ರ ಚುನಾವಣೆ ನನ್ನ ಸಾರಥ್ಯದಲ್ಲಿ ನಡೆಯಬೇಕೆಂದು ಆಗ ಹೇಳಿದ್ದರು. ಆದರೆ ಕೇಂದ್ರದ ನಾಯಕರು ಹೇಳಿದಂತೆ ಅಂತಿಮವಾಗುತ್ತೆ. ಯಾರ ಯಾರೋ ಹೇಳಿದ್ದಕ್ಕೆ ನಮ್ಮಲ್ಲಿ ಬೆಲೆ ಇಲ್ಲ. ಅನೇಕ ಶಾಸಕರು ಅನೇಕ ಹೇಳಿಕೆ ನೀಡಿದ್ದಾರೆ ಆದರೆ ಆ ಹೇಳಿಕೆಗಳು ಅವರ ವ್ಯಯಕ್ತಿಕ ಹೇಳಿಕೆಯಾಗಿದೆ. ಪಕ್ಷದ ನಾಯಕರ ನಿರ್ಧಾರಕ್ಕೆ ನಾವು ಜೈ ಎನ್ನುತ್ತೇವೆ ಎಂದು ಹೇಳಿದ್ದಾರೆ.

















