ಮಂಡ್ಯ: ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರ ಆಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ. ಚಂದ್ರಶೇಖರ್ ಅವರಿಗೆ ಮಂಡ್ಯ ಸ್ಥಳೀಯ ನಾಯಕರು ಪತ್ರದ ಮೂಲಕ ಮನವಿ ಮಾಡಿದ್ದಾರೆ.

ರಾಜ್ಯದ್ಯಾಂತ ಈ ಆಡಿಯೋ ವೈರಲ್ ಆಗಿರುವುದರಿಂದ ಪಕ್ಷಕ್ಕೆ ಮುಜುಗರ ಉಂಟಾಗುತ್ತಿದ್ದು, ಇದರ ಪರಿಣಾಮ ಪಕ್ಷದ ಇಮೇಜ್ ಹಾಗೂ ಕಾರ್ಯಕರ್ತರ ಮೇಲೂ ಬೀರುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಈ ರೀತಿಯ ಬೆಳವಣಿಗೆಗಳು ಪಕ್ಷದ ಗೌರವಕ್ಕೆ ಧಕ್ಕೆಯುಂಟುಮಾಡುತ್ತಿವೆ ಎಂಬ ಆತಂಕವನ್ನು ಸ್ಥಳೀಯ ನಾಯಕರು ವ್ಯಕ್ತಪಡಿಸಿದ್ದಾರೆ.
ಹೀಗಾಗಿ, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಪಕ್ಷದ ಹಿತದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ನಾಯಕರು, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಅವರನ್ನು ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಅಬಕಾರಿ ಇಲಾಖೆ ಭ್ರಷ್ಟಾಚಾರ ಆರೋಪ | ಇಂದು ಮತ್ತೆ ಸದನದಲ್ಲಿ ಗದ್ದಲ ಸಾಧ್ಯತೆ



















