ರಾಯಚೂರು : ಹಿಂದುಗಳ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಹಾಶಿವರಾತ್ರಿ ಹಬ್ಬವನ್ನು ಇಂದು ರಾಜ್ಯಾದ್ಯಂತ ಅದ್ದೂರಿಯಿಂದ ಆಚರಿಸಲಾಗುತ್ತಿದೆ. ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರಸ್ವಾಮಿ ಮಠದಲ್ಲಿಯೂ ಶಿವಲಿಂಗಕ್ಕೆ ವಿಶೇಷ ಮಹಾರುದ್ರಾಭಿಷೇಕ ನೆರವೇರಿಸಲಾಯಿತು.

ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ರುದ್ರದೇವರಿಗೆ ಅಭಿಷೇಕ ಹಾಗೂ ವಿಶೇಷ ಪೂಜೆ ನೆರವೇರಿಸಿದ್ದಾರೆ. ಈ ವೇಳೆ ಮಠದ ಸಂಸ್ಕೃತ ವಿದ್ಯಾಪೀಠದ ವಿದ್ಯಾರ್ಥಿಗಳು ಹಾಗೂ ಮಠದ ಪಂಡಿತರು ನಿರಂತರವಾಗಿ ಮಂತ್ರಗಳನ್ನ ಪಠಿಸಿದ್ದು, ಮಠದ ಶ್ರೀಗಳು ಮಹಾರುದ್ರಾಭಿಷೇಕದ ಜೊತೆ ವಿವಿಧ ಪೂಜಾ ಕೈಂಕರ್ಯಗಳನ್ನ ನೆರವೇರಿಸಿದ್ದಾರೆ.
ಇನ್ನೂ ರಾಯಚೂರು ನಗರದ ಎಲ್ಲಾ ಈಶ್ವರ ದೇವಾಲಯಗಳಲ್ಲೂ ಬೆಳಿಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಆರಂಭವಾಗಿದ್ದು, ಭಕ್ತರ ದಂಡು ದೇವಾಲಯಗಳಿಗೆ ಹರಿದು ಬರುತ್ತಿದೆ.
ನಗರದ ನಂದೀಶ್ವರ ದೇವಾಲಯ, ಚಂದ್ರಮೌಳೇಶ್ವರ ದೇವಾಲಯ, ಕೊದಂಡರಾಮ ದೇವಾಲದ, ಈಶ್ವರ ದೇವಾಲಯಗಳಲ್ಲಿ ಮಹಾಶಿವರಾತ್ರಿ ಜಾಗರಣೆ ಹಿನ್ನೆಲೆ ಸಂಜೆಯಿಂದ ವಿಶೇಷ ಸಂಗೀತ, ಭಜನೆ ಕಾರ್ಯಕ್ರಮಗಳು ಜರುಗಲಿವೆ.
ಇದನ್ನೂ ಓದಿ : ಭಾರತ-ಪಾಕ್ ಹೈವೋಲ್ಟೇಜ್ ಕದನಕ್ಕೆ ವರುಣನ ಅಡ್ಡಿ? ಕೊಲಂಬೊದಲ್ಲಿ ಭಾರೀ ಮಳೆ ಸಾಧ್ಯತೆ!



















