ಬಿಗ್ ರಿಲೀಫ್ ನ ನಿರೀಕ್ಷೆಯಲ್ಲಿದ್ದ ಸಿಎಂ ಸಿದ್ದರಾಮಯ್ಯಗೆ ಇವತ್ತು ದೊಡ್ಡ ಶಾಕ್ ಎದುರಾಗಿದೆ.
ಮುಡಾ ಹಗರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ಪರಿಗಣಿಸಲು ಕೋರ್ಟ್ ನಿರಾಕರಿಸಿದೆ. ಅಷ್ಟೇ ಅಲ್ಲಾ ಬಿ ರಿಪೋರ್ಟ್ ಗೂ ಮುನ್ನ ತನಿಖಾ ವರದಿಯನ್ನು ಕೋರ್ಟ್ ಗೆ ಸಲ್ಲಿಸುವಂತೆ ಸೂಚಿಸಿದೆ.
ತನಿಖೆಗೆ ಅನುಮತಿ ಕೋರಿ ಲೋಕಾಯುಕ್ತ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತನಿಖೆಗೆ ಸಮ್ಮತಿಸಿದ್ದು ಮೇ 7ಕ್ಕೆ ಅಂತಿಮ ವರದಿ ನೀಡುವಂತೆ ತಾಕೀತು ಮಾಡಿದೆ. ಈ ನಡುವೆ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮೇ 7ಕ್ಕೆ ಕೋರ್ಟ್ ಮುಂದೂಡಿದೆ.