ದಾವಣಗೆರೆ : ಸಿದ್ದರಾಮಯ್ಯ ಸರ್ಕಾರ ಟ್ಯಾಕ್ಸ್ ಟೆರರಿಸಂ ಮಾಡುತ್ತಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ.
ಇಂದು ದಾವಣಗೆರೆ ಬೈ ಎಲೆಕ್ಷನ್ ಸಂಧರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೊಮ್ಮಾಯಿ, ಸರ್ಕಾರ ಹೊಸ ಹೊಸ ತೆರಿಗೆಗಳನ್ನು ಹಾಕಿ ಜನರಿಂದ ಹಣ ಲೂಟಿ ಮಾಡುತ್ತಿದ್ದಾರೆ. ಸಾಲ ಮಾಡಿ ಸಾಲದ ದಾಖಲೆಯ ಸಿದ್ದರಾಮಯ್ಯ ಎಂದು ಹೆಸರು ಪಡೆದುಕೊಂಡಿದ್ದಾರೆ ಎಂದು ವಾಗ್ವಾದ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ನಡೆಯುತ್ತಿದೆ. ಆಸ್ಪತ್ರೆಯ ಔಷಧಿ ಖರೀದಿಯಲ್ಲಿ ಭ್ರಷ್ಟಾಚಾರ ಇದೆ. ಅಡಳಿತ ಹಾಗೂ ವರ್ಗಾವಣೆ ದಂಧೆಯಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ಹೆಚ್ಚಾಗಿದೆ. ಗುತ್ತಿಗೆದಾರರು, ಅಬಕಾರಿ ಗುತ್ತಿಗೆದಾರರು ಸರ್ಕಾರದ ವಿರುದ್ದ ಭ್ರಷ್ಟಾಚಾರದ ಅರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಎರಡು ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಪಥನದ ಮೊದಲ ಹೆಜ್ಜೆ ಆಗುತ್ತದೆ. ಇದನ್ನು ಜನರು ಸವಾಲಾಗಿ ತೆಗೆದುಕೊಂಡು ಭ್ರಷ್ಟ ಸರ್ಕಾರವನ್ನು ತೆಗೆದುಹಾಕುವ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ.
ಇನ್ನು, ಇದೇ ವೇಳೆ, ಶಾಸಕರು ಐಪಿಎಲ್ ಟಿಕೆಟ್ಗಾಗಿ ಆಗ್ರಹಿಸಿದ ವಿಚಾರವಾಗಿ ಮಾತನಾಡಿ, ಐಪಿಎಲ್ ಟಿಕೆಟ್ ಇಷ್ಟೊಂದು ಮಹತ್ವ ಕೊಡುವ ಅವಶ್ಯಕತೆ ಇರಲಿಲ್ಲ. ಅದು ನಮ್ಮ ದೇಶಿಯ ಕ್ರೀಡೆ ಕೂಡ ಅಲ್ಲ ಎಂದಿದ್ದಾರೆ.
ಇದನ್ನೂ ಓದಿ : ಮೃತ ವೃದ್ಧೆಯನ್ನ ತಬ್ಬಿ ಕಣ್ಣೀರು ಹಾಕಿದ ಕೋತಿ.. ವಿಡಿಯೋ ವೈರಲ್!



















