ಬೆಂಗಳೂರು : ಬೆಂಗಳೂರಿನ ಆರ್ ಆರ್ ನಗರದ ಬೆಮಲ್ ಲೇಔಟ್ನಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದ್ದು, ಪುತ್ರನೇ ತನ್ನ ತಾಯಿಯನ್ನು ಮಹಡಿಯಿಂದ ತಳ್ಳಿ ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಸಾವಿತ್ರಮ್ಮ (72) ಎಂಬ ವೃದ್ಧ ಮಹಿಳೆಯನ್ನು, ಅವರ ಪುತ್ರ ವೆಂಕಟೇಶ (42) ಮೂರನೇ ಮಹಡಿಯಿಂದ ನೂಕಿ ಹತ್ಯೆ ಮಾಡಿದ ಆರೋಪ ಕೇಳಿಬಂದಿದೆ. ನಿನ್ನೆ(ಏ.15) ಮಧ್ಯಾಹ್ನ ಸಂಭವಿಸಿದ್ದು, ಇಂದು ಬೆಳಕಿಗೆ ಬಂದಿದೆ.
ಮೃತ ಸಾವಿತ್ರಮ್ಮ ಅವರು ಕಳೆದ 4-5 ವರ್ಷಗಳಿಂದ ಪಾರ್ಶ್ವವಾಯು ಸೇರಿದಂತೆ ಹಲವು ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಮನೆಯಲ್ಲೇ ಇದ್ದ ತಾಯಿಯ ಆರೈಕೆ ವಿಚಾರದಲ್ಲಿ ಉಂಟಾದ ಬೇಸರದಿಂದ ಪುತ್ರ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆಯ ಕುರಿತು ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ : ಮೈಸೂರು : ಸೌದೆ ತರಲು ಹೋಗಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ


















