ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶಕ್ಕೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಗೈರಾಗಿದ್ದು, ಈ ಕುರಿತು ಪತ್ರ ಬರೆದಿರುವ ಅವರು ಕಾರ್ಯಕ್ರಮಕ್ಕೆ ಗೈರಾಗಿರುವ ಕಾರಣಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸಾಮೂಹಿಕವಾಗಿ ಪಕ್ಷ ಸಂಘಟನೆ ಮಾಡೋಣ ಎಂದು ಕರೆ ನೀಡಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಸೋನಿಯಾ ಗಾಂಧಿ, ಐತಿಹಾಸಿಕ ಕಾರ್ಯಕ್ರಮದಲ್ಲಿ ನಿಮ್ಮೊಂದಿಗಿರಲು ಸಾಧ್ಯವಾಗುತ್ತಿಲ್ಲ. ಕಾರ್ಯಕ್ರಮಕ್ಕೆ ಗೈರಾಗಿರುವ ಕಾರಣಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. 39ನೇ ಅಧಿವೇಶನ ನಡೆದ ಸ್ಥಳದಲ್ಲೇ ನೀವೆಲ್ಲಾ ಸಮಾವೇಶಗೊಂಡಿರುವುದು ಸೂಕ್ತವಾಗಿದೆ. ಗಾಂಧೀಜಿ ಇದೇ ಸ್ಥಳದಲ್ಲಿ ಅಧ್ಯಕ್ಷರಾಗಿರುವುದಕ್ಕೆ ನಮ್ಮ ಪಕ್ಷಕ್ಕೆ ಹಾಗೂ ಸ್ವಾತಂತ್ರ್ಯ ಚಳವಳಿಗೆ ಮಹತ್ವದ ತಿರುವು ಸಿಕ್ಕಂತಾಗಿದೆ. ದೆಹಲಿಯಲ್ಲಿ ಅಧಿಕಾರದಲ್ಲಿ ಇರುವವರಿಂದ ಗಾಂಧೀಜಿ ತತ್ವ ಸಿದ್ಧಾಂತಗಳಿಗೆ ಬೆದರಿಕೆ ಇದೆ.
ಅಧಿಕಾರದಲ್ಲಿರುವ ಸಂಘಟನೆಗಳು ಎಂದೂ ಸ್ವಾತಂತ್ರ್ಯಕ್ಕಾಗಿ ಎಂದೂ ಹೋರಾಟ ಮಾಡಲಿಲ್ಲ.. ಮಹಾತ್ಮ ಗಾಂಧೀಜಿ ಅವರನ್ನು ಕಟುವಾಗಿ ವಿರೋಧಿಸಿದವರು, ಗಾಂಧೀಜಿ ಹತ್ಯೆ ಮಾಡಿದವರನ್ನು ಸಂಭ್ರಮಿಸಿದವರು ಎಂದು ಬಿಜೆಪಿ ವಿರುದ್ಧ ಗುಡುಗಿದ್ದಾರೆ.