ಪಾಕಿಸ್ತಾನದ ಪರ ಗೂಢಚಾರಿಕೆ ಮಾಡುತ್ತಿದ್ದವರಿಗೆ ಹೆಡೆಮುರಿ ಕಟ್ಟಲಾಗಿದೆ. ಭಾರತದ ಮಣ್ಣಲ್ಲೇ ಹುಟ್ಟಿ, ಇಲ್ಲೇ ನೆಲೆಸಿರುವ ಕೆಲವರು ಪಾಕಿಸ್ತಾನಕ್ಕೆ ಅತ್ಯಂತ ರಹಸ್ಯ ಮಾಹಿತಿಗಳನ್ನು ರವಾನಿಸುತ್ತಿರುವ ಸುಳಿವು ಲಭಿಸಿತ್ತು.
ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪಂಜಾಬ್ ಪೊಲೀಸರು, ಪಟಿಯಾಲದ 25 ವರ್ಷದ ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿದ್ದಾರೆ. ಅಸಲಿಗೆ ದೇವೇಂದರ್ ಸಿಂಗ್ ತನ್ನ ಫೇಸ್ ಬುಕ್ ನಲ್ಲಿ ಬಂದೂಕು ಮತ್ತು ಪಿಸ್ತೂಲಿನ ಫೋಟೋಗಳನ್ನು ಅಪ್ ಲೋಡ್ ಮಾಡಿದ್ದ. ಈ ಹಿನ್ನೆಲೆಯಲ್ಲಿ ಆತನನ್ನ ವಶಕ್ಕೆ ಪಡೆದಾಗಲೇ ಪೊಲೀಸರು ಬೆಚ್ಚಿಬಿದ್ದಿದ್ದಾರೆ.
ದೇವೇಂದ್ರ ಸಿಂಗ್ ಕಳೆದ ನವೆಂಬರ್ ನಲ್ಲಿ ಕರ್ತಾರ್ ಪುರ್ ಸಾಹೇಬ್ ಮಾರ್ಗವಾಗಿ ಪಾಕಿಸ್ತಾನಕ್ಕೆ ಹೋಗಿ ಬಂದಿದ್ದು ಬೆಳಕಿಗೆ ಬಂದಿತ್ತು. ಅಷ್ಟೇ ಅಲ್ಲಾ ಭಾರತದ ಗಡಿಯ ಕೆಲ ಗೌಪ್ಯ ಮಾಹಿತಿಯನ್ನು ಐಎಸ್ಐ ಜೊತೆ ಹಂಚಿಕೊಂಡಿರುವುದನ್ನೂ ದೇವೇಂದರ್ ಬಾಯ್ಬಿಟ್ಟಿದ್ದಾನೆ. ಪಟಿಯಾಲದ ಖಾಲ್ಸಾ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗದಲ್ಲಿ ಓದುತ್ತಿರುವ ದೇವೇಂದ್ರ ಸಿಂಗ್ ನನ್ನ ವಶಕ್ಕೆ ಪಡೆದಿರೋ ಪೊಲೀಸರು ಇದೀಗ ಹೆಚ್ಚಿನ ವಿಚಾರಣೆ ಮುಂದುವರಿಸದ್ದಾರೆ.