ಗೋವಾದ ಸುಪ್ರಸಿದ್ಧ ಶಿರ್ಗಾಂವ್ ಉತ್ಸವದಲ್ಲಿ ದುರಂತ ಘಟಿಸಿದೆ.
ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಆರು ಮಂದಿ ಬಲಿಯಾಗಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗೋವಾದ ಪ್ರಸಿದ್ಧ ದೈವ ಕ್ಷೇತ್ರ ಶಿರ್ಗಾಂವ್ ನಲ್ಲಿ ನಿನ್ನೆ ಅದ್ಧೂರಿ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ, ಮಹಾರಾಷ್ಟ್ರ ಸೇರಿ ಹಲವೆಡೆಯಿಂದ ಅಪಾರ ಭಕ್ತರ ಜಮಾಯಿಸಿದ್ದರು. ದೇವರ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾಲುಗಟ್ಟಿ ನಿಂತಿದ್ದ ಭಕ್ತರ ಮಧ್ಯ ಗೊಂದಲದ ವಾತಾವರಣ ನಿರ್ಮಾಣವಾಗಿದೆ.
ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 6 ಭಕ್ತರು ಬಲಿಯಾಗಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗೋವಾ ಪೊಲೀಸರು, ಕಾಲ್ತುಳಿತದ ಮೂಲ ಶೋಧ ಆರಂಭಿಸಿದ್ದಾರೆ.