ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಉಂಟಾದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣ ದಾಖಲಾಗಿದೆ.
ಆರ್ ಸಿಬಿ, ಡಿಎನ್ ಎ, ಚಿನ್ನಸ್ವಾಮಿ ಸ್ಟೇಡಿಯಂ ಮತ್ತು ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಕಬ್ಬನ್ ಪಾರ್ಕ್ ನಡಿಗೆದಾರರ ಸಂಘದ ಅಧ್ಯಕ್ಷ ಉಮೇಶ್ ಎಂಬುವವರು ಸಿಡಿ ರೂಪದಲ್ಲಿ ಸಾಕ್ಷಿ ಸಮೇತ ದೂರು ಸಲ್ಲಿಕೆ ಮಾಡಿದ್ದಾರೆ.
ಆರ್ ಸಿಬಿ ಆಟಗಾರರನ್ನು ನೋಡಲು ವಿಧಾನಸೌಧಕ್ಕೆ ಮುಗಿಬಿದ್ದ ಸಂದರ್ಭದಲ್ಲಿ ಗಿಡ-ಮರಗಳಿಗೆ ಹಾನಿ ಮಾಡಿದ್ದಾರೆ. ಜನರ ಕಾಲ್ತುಳಿತದಿಂದ ನೆಲಮಟ್ಟದ ಗಿಡಗಳು ನೆಲಸಮವಾಗಿವೆ. ಇದರಿಂದಾಗಿ ಕಬ್ಬನ್ ಪಾರ್ಕ್ ಗೆ ದೊಡ್ಡ ಸಮಸ್ಯೆಯಾಗಿದೆ. ಹಲವಾರು ಗಿಡ-ಮರಗಳಿಗೆ ಸಾಕಷ್ಟು ಡ್ಯಾಮೇಜ್ ಮಾಡಿದ್ದಾರೆಂದು ದೂರು ಸಲ್ಲಿಸಿದ್ದಾರೆ. ಈ ಕುರಿತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.