ಹುಬ್ಬಳ್ಳಿ : ಅತ್ಯಾಚಾರ ಮತ್ತು ಎನ್ ಕೌಂಟರ್ ಪ್ರಕರಣದ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ರಾಜ್ಯ ಮಾನವ ಹಕ್ಕುಗಳ ಆಯೋಗ ಭೇಟಿ ನೀಡಿದೆ.
ಕೊಲೆಯಾದ ಬಾಲಕಿ ಮನೆಗೆ ಮಾನವ ಹಕ್ಕು ಆಯೋಗದ ಅಧ್ಯಕ್ಷ ಶಾಮ್ ಭಟ್ ಮತ್ತು ಸದಸ್ಯ ವಂಟಗೋಡಿ ಭೇಟಿ ನೀಡಿ ಘಟನೆ ಕುರಿತು ಮಾಹಿತಿ ಕಲೆ ಹಾಕಿದ್ದಾರೆ. ಈ ವೇಳೆ ಕುಟುಂಬದ ಸದಸ್ಯರಿಗೆ ಆಯೋಗದ ಅಧ್ಯಕ್ಷ ಶಾಮ್ ಭಟ್ ಸಾಂತ್ವಾನ ಹೇಳಿದ್ದಾರೆ.
ಏಪ್ರಿಲ್ 13 ರಂದು ಹುಬ್ಬಳ್ಳಿ ನಗರದಲ್ಲಿ ಬಿಹಾರ್ ಮೂಲದ ರಿತೇಶ್ ಕುಮಾರ್ ಎಂಬ ದುರುಳ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ. ಅಂದೇ ಪೊಲೀಸರು ಆತನನ್ನು ಎನಕೌಂಟರ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮಾನವ ಹಕ್ಕುಗಳ ಆಯೋಗ ಭೇಟಿ ನೀಡಿ ಪರಿಶೀಲನೆ ನಡೆಸಿದೆ.