ಮಂಡ್ಯ : ಕಾವೇರಿ ಆರತಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಆರತಿ ಹಾಗೂ ಅಮ್ಯೂಸ್ ಮೆಂಟ್ ಪಾರ್ಕ್ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡಸಲಾಯಿತು.
ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಪ್ರೋಟೆಸ್ಟ್ ನಡೆಸುತ್ತಿದ್ದು, ರೈತರ ಹೋರಾಟಕ್ಕೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಬೆಂಬಲ ವ್ಯಕ್ತಪಡಿಸಿದ್ದಾರೆ. KRS ನಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್ ರದ್ದುಗೊಳಿಸಿ. ಕಾವೇರಿ ಆರತಿ ನಿಲ್ಲಿಸಿ, ಆಧುನಿಕರಣ ಬಳಸಿ ಕೊನೆ ಭಾಗದ ರೈತರಿಗೆ ನೀರು ಕೊಡಿ. ರಾಜ್ಯ ಸರ್ಕಾರ ಟನ್ ಕಬ್ಬಿಗೆ 500 ರೂ. ಪ್ರೋತ್ಸಾಹ ಧನ ನೀಡಬೇಕು. ರೈತ ವಿರೋಧಿ ಕಾಯ್ದೆಯನ್ನು ಕೇಂದ್ರ-ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು.
KRS , ನಾಲೆ ವ್ಯಾಪ್ತಿಯಲ್ಲಿ ನೀರು ಬಿಟ್ಟು ಜಾನುವಾರಗಳನ್ನು ಉಳಿಸಬೇಕು. ಭತ್ತ ಖರೀದಿ ಕೇಂದ್ರ ತೆರೆಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಲಾಯಿತು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಕೆಂಪೂಗೌಡ, ಸೇರಿದಂತೆ ಹಲವಾರು ರೈತ ಮುಖಂಡರು ಭಾಗಿಯಾಗಿದ್ದರು.