ಮಂಗಳೂರಿನಲ್ಲಿ ನಡೆದಿರುವ ಹಿಂದೂ ಮುಖಂಡನ ಹತ್ಯೆ ಇಡೀ ಸಮಾಜವೇ ಬೆಚ್ಚಿ ಬೀಳುವಂತಿದ್ದು, ಈ ಪ್ರಕರಣದ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ವಿಫಲಾಗಿದೆ ಎಂದು ವಿಶ್ವ ಹಿಂದೂ ಪರಿಷದ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ನಿರಂತರವಾಗಿ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತಿವೆ. ಸುಹಾಸ್ ಶೆಟ್ಟಿ ಕೊಲೆ ಕೇಸ್ ನ ಅರೋಪಿಗಳಿಗೆ ಪಿಎಫ್ ಐ ನಂಟು ಇದೆ. ಪ್ರಕರಣದ ಆರೋಪಿಗಳ ಖಾತೆಗೆ 50 ಲಕ್ಷ ರೂ.ಗೂ ಅಧಿಕ ಹಣ ವರ್ಗಾವಣೆಯಾಗಿದೆ. ಈ ಬಗ್ಗೆ ಸರ್ಕಾರ ಕೂಡಲೇ ತನಿಖೆ ನಡೆಸಬೇಕು. ಈ ಪ್ರಕರಣವನ್ನು ಎನ್ ಐಎಗೆ ವಹಿಸಬೇಕೆಂದು ಮನವಿ ಮಾಡಿದ್ದಾರೆ.
ಕೊಲೆ ಮಾಡಿದ ಕೊಲೆಗಾರರಿಗೆ ಶಿಕ್ಷೆ ಅಗಬೇಕು. ಹಿಂದೂ ಮುಖಂಡರಿಗೆ ರಕ್ಷಣೆ ನೀಡಬೇಕು ಎಂದು ವಿಶ್ವ ಹಿಂದು ಪರಿಷದ್ ನ ಪ್ರಾಂತ ಕಾರ್ಯದರ್ಶಿ ಜಗನ್ನಾಥ್ ಶಾಸ್ತ್ರಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ವೇಳೆ ಕಾರ್ಯಕರ್ತರು ಕೂಡ ಹಾಜರಿದ್ದರು. ಅಲ್ಲದೇ, ಈ ಕುರಿತು ಕೇಂದ್ರ ಗೃಹ ಸಚಿವರಿಗೆ, ರಾಜ್ಯ ಗೃಹ ಸಚವರಿಗೆ ಪತ್ರ ಬರೆದು ಮನವಿ ಮಾಡುತ್ತೇವೆ ಎಂದು ಕರ್ನಾಟಕ ನ್ಯೂಸ್ ಬೀಟ್ ಗೆ ತಿಳಿಸಿದ್ದಾರೆ.