ಇರಾನ್ ಮತ್ತು ಇಸ್ರೇಲ್ ಮಧ್ಯೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇರಾನ್ ನಲ್ಲಿ ಸಿಲುಕಿದ್ದ ಭಾರತೀಯ ವಿದ್ಯಾರ್ಥಿಗಳು ಇಂದು ತವರಿಗೆ ಆಗಮಿಸಿದ್ದಾರೆ.
ಎಂಬಿಬಿಎಸ್ ವ್ಯಾಸಂಗಕ್ಕೆಂದು ಇರಾನ್ ಗೆ ಹೋಗಿದ್ದ ಭಾರತೀಯ ವಿದ್ಯಾರ್ಥಿಗಳು ಇಂದು ತವರಿಗೆ ಮರಳಿದ್ದಾರೆ. ಇರಾನ್ ನಿಂದ ದೆಹಲಿಗೆ ವಿದ್ಯಾರ್ಥಿಗಳು ಬಂದಿಳಿದಿದ್ದಾರೆ. ಗೌರಿಬಿದನೂರು ತಾಲೂಕಿನ ಆಲಿಪುರ ಮೂಲದ ವಿದ್ಯಾರ್ಥಿಗಳು ಎಂಬಿಬಿಎಸ್ ಓದುವುದಕ್ಕಾಗಿ ಇರಾನ್ ಗೆ ತೆರಳಿದ್ದರು. ಆದರೆ, ಇರಾನ್ ನಲ್ಲಿ ಯುದ್ಧ ಆರಂಭವಾದ ಹಿನ್ನೆಲೆಯಲ್ಲಿ ಮರಳಿ ತಾಯ್ನಾಡಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಆಗಮಿಸಿದ್ದ ಪೋಷಕರು ತಮ್ಮ ಮಕ್ಕಳನ್ನು ಬರಮಾಡಿಕೊಂಡರು.