ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಸರಿಗಮಪ ಮೂಲಕ ಖ್ಯಾತಿ ಪಡೆದ ಗಾಯಕಿ ಸುಹಾನಾ ಸೈಯದ್, ಇತ್ತೀಚೆಗಷ್ಟೇ ನಿತಿನ್ ಶಿವಾಂಶ್ ಅವರನ್ನು ಮದುವೆಯಾಗಿದ್ದರು. ಇವರಿಬ್ಬರ ಧರ್ಮ ಬೇರೆ ಬೇರೆ ಆಗಿದ್ದ ಕಾರಣ ಈ ಸುದ್ದಿ ದೊಡ್ಡ ಮಟ್ಟದಲ್ಲಿ ವೈರಲ್ ಆಗಿತ್ತು. ಇವರ ಧರ್ಮ ಬೇರೆಯಾದ ಕಾರಣ ಕುಟುಂಬಸ್ಥರ ವಿರೋಧದ ನಡುವೆಯು ಅವರನ್ನು ಒಪ್ಪಿಸಿ ಮದುವೆಯಾಗೋದು ಸುಲಭ ಮಾತಾಗಿರಲಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಸುಹಾನಾ ಸಖತ್ ಆಕ್ಟೀವ್ ಆಗಿದ್ದಾರೆ.
ಸವದತ್ತಿ ಯಲ್ಲಮ್ಮ ಎಂದು ಹೆಸರು ಬದಲಿಸಿಕೊಳ್ಳಿ ಎಂದು ಬಂದ ಕಮೆಂಟ್ಗೆ ಸೈಯದ್ ಹೆಸರು ತುಂಬಾ ಅಮೂಲ್ಯವಾದದ್ದು. ಆದ್ದರಿಂದ ನಿಮ್ಮ ಹೆಸರನ್ನು ಸೈಯದ್ ಬದಲು ಸವದತ್ತಿ ಯಲ್ಲಮ್ಮ ಎಂದು ಬದಲಿಸಿಕೊಳ್ಳಿ ಎಂಬ ನೆಟ್ಟಿಗನ ಮಾತಿಗೆ ತಿರುಗೇಟು ಕೊಟ್ಟಿದ್ದಾರೆ.
ನೀವು ಹೀಗೆ ಮಾತನಾಡಿ ಒಂದು ಧರ್ಮಯನ್ನು ಗೌರವಿಸುತ್ತಿದ್ದೀನಿ ಅಂತ ಅಂದುಕೊಂಡಿದ್ದೀರಾ. ನಾನು ಕೂಡ ಸಹಾನುಭೂತಿ ಇರುವ ಧರ್ಮವನ್ನು ಗೌರವಿಸಿಕೊಂಡು ಬಂದಿದ್ದೀನಿ. ಅದಕ್ಕೆ ವಿದ್ಯಾಭ್ಯಾಸ ಬಹಳ ಮುಖ್ಯ ಅನ್ನೋದು. ಒಳ್ಳೆ ಶಾಲೆ ಸೇರಿ, ಒಳ್ಳೆ ಬುದ್ಧಿ ಕಲೀರಿ. ನಿಮ್ಮ ಧರ್ಮವನ್ನು ಗೌರವಿಸಿ, ಇನ್ನೊಬ್ಬರ ಧರ್ಮವನ್ನು ಅಗೌರವಿಸುವುದು ಸರಿಯಲ್ಲ” ಎಂದು ಹೇಳಿದ್ದಾರೆ.
ಈ ರೀತಿ ಮಾತನಾಡಿ ನಮ್ಮ ಧರ್ಮವನ್ನು ಉಳಿಸುತ್ತಿದ್ದೀವಿ ಅಂದುಕೊಂಡಿದ್ದೀರಾ. ಒಂದು ಧರ್ಮ ಉಳಿಯಲು ಕಂಡಿತ ನಿಮ್ಮಂಥವರ ಅವಶ್ಯಕತೆ ಇಲ್ಲವೇ ಇಲ್ಲ. ಎಲ್ಲಿಂದ ಬರ್ತೀರಾ ನೀವೆಲ್ಲಾ ಎಂದು ಸುಹಾನಾ ಸಯ್ಯದ್ ಗರಂ ಆಗಿದ್ದಾರೆ.
ಇದನ್ನೂ ಓದಿ : ದಾಖಲೆಯ ಭಾರೀ ಹಿಮಪಾತ | 8 ಜನ ಬ*ಲಿ



















